ಉಳ್ಳಾಲ: ಮಾಜಿ ಶಾಸಕ, ಸಾಹಿತಿ ದಿ.ಇದಿನಬ್ಬ ಪುತ್ರನ ಮನೆಗೆ ಎನ್ಐಎ ಬೆಳಂಬೆಳಿಗ್ಗೆ ದಾಳಿ ನಡೆದಿರುವ ಶಂಕೆ ಇದೆ. ಇದಿನಬ್ಬ ಮರಿ ಮೊಮ್ಮಗಳು ಐಸಿಸ್ ಸೇರಿರುವ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಇದಿನಬ್ಬರ ಮರಿ ಮೊಮ್ಮಗಳ ಕುಟುಂಬ, ಸದ್ಯ ಎನ್ಐಎ ದಾಳಿ ನಡೆಸಿರುವ ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳು ಅಜ್ಮಲ್.
2 ವರ್ಷಗಳ ಹಿಂದೆ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು, ಈ 17 ಜನರ ಪೈಕಿ ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಮೊಮ್ಮಗಳು ಅಜ್ಮಲ್ ಕುಟುಂಬವೂ ಇತ್ತುಎಂಬ ಶಂಕೆ ವ್ಯಕ್ತವಾಗಿದೆ.ಅಜ್ಮಲ್ಳನ್ನ ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಅನ್ನೋನ ಜೊತೆ ವಿವಾಹ ಮಾಡಿ ಕೊಡಲಾಗಿತ್ತು. ವರ್ಷಗಳ ಹಿಂದೆ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗುತ್ತಿರುವುದಾಗಿ ಹೇಳಿ ಹೋದವರು ಇಂದಿನವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ.
ಶ್ರೀಲಂಕಾದಿದ ಮಸ್ಕತ್ ಹಾಗೂ ಕತಾರ್ ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂದು ಮಾಹಿತಿ ಇತ್ತು. ವೈದ್ಯರಾಗಿರುವ ಸಿಯಾಝ್ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ ತೆರಳಿದ್ದ.ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟಿçÃಯ ತನಿಖಾ ದಳ ತನಿಖೆ ಆರಂಭಿಸಿತ್ತು, ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಬಾಷಾ ಮನೆಗೆ ದಾಳಿ ನಡೆದಿರುವ ಶಂಕೆ ಇದೆ.
ಸಾಹಿತಿಯೂ ಆಗಿದ್ದ ದಿ.ಇದಿನಬ್ಬ ಮೂರು ಬಾರಿ ಕಾಂಗ್ರೆಸ್ನಿAದ ಉಳ್ಳಾಲ ಶಾಸಕರಾಗಿ ಆಯ್ಕೆಯಾಗಿದ್ದರು,