News Karnataka Kannada
Monday, April 29 2024
ಕರ್ನಾಟಕ

ಮಾಜಿ ಸಚಿವ ಯು ಟಿ ಖಾದರ್‌ ಕಾರು ಅಪಘಾತ

Photo Credit :

    ಮಾಜಿ ಸಚಿವ  ಯು ಟಿ ಖಾದರ್‌ ಕಾರು ಅಪಘಾತ

ದಾವಣಗೆರೆ, : ಮಾಜಿ ಸಚಿವ ಹಾಗೂ ಶಾಸಕ ಯು.ಟಿ ಖಾದರ್ ಅವರ ಕಾರು ಅಪಘಾತವಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ನಡೆದಿದೆ. ದಾವಣಗೆರೆ ತಾಲ್ಲೂಕಿನ ಆನಗೋಡು ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ಬೆಂಗಳೂರಿನಿಂದ ಬರುತ್ತಿದ್ದ ಮಾಜಿ ಸಚಿವರ ಕಾರು, ಮುಂದೆ ಹೋಗುತ್ತಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ದಿವಂಗತ ನಟ ಶಂಕರ್‌ ನಾಗ್‌ ಅವರ ಕಾರು ಅಪಘಾತವಾಗಿದ್ದ ಸ್ಥಳದಲ್ಲೇ ಈ ಕಾರು ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಸಚಿವರ ಕಾರಿನ ಮುಂಭಾಗದ ಬಾನೇಟ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಎಸ್ಪಿ ಹನುಮಂತರಾಯ ಭೇಟಿ ನೀಡಿ, ಮಾಜಿ ಸಚಿವರ ಆರೋಗ್ಯ ವಿಚಾರಣೆ ನಡೆಸಿದರು. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಾಜಿ‌ ಸಚಿವ ಯು.ಟಿ ಖಾದರ್ ರವರಿಗೆ ಯಾವುದೇ ಗಾಯವಾಗಿಲ್ಲ. ಅಪಘಾತ ಸಂಭವಿಸಿದ್ದರಿಂದ ತಮ್ಮ ಕಾರು ಬಿಟ್ಟು ಬೇರೊಂದು ಕಾರಿನ ಮೂಲಕ ಖಾದರ್ ತೆರಳಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು