ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರರಿಗೆ ಒಂದು ಕೆಜಿ ನೂರ ಹತ್ತು ಗ್ರಾಂ ತೂಕದ ಮೂರು ಕಣ್ಣಿನ ಬೆಳ್ಳಿ ವಸ್ತು ಕಾಣಿಕೆಯನ್ನು ಭಕ್ತಾಧಿಯೊಬ್ಬರ ಮೂಲಕ ಕಳಿಸಿ ಕೊಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ವಿದೇಶಾಂಗ ಸಚಿವರಾದ ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿ ಅವರ ಮನೆಯಲ್ಲಿ ಶ್ರೀ ಮಲೈ ಮಹದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ರವರು ಖುದ್ದು ಭೇಟಿ ಮಾಡಿ, ಅವರಿಗೆ ಅಭಿನಂದಿಸಿ ಅಭಿನಂದನಾ ಪತ್ರ ಹಾಗೂ ದೇವರ ಪ್ರಸಾದ ನೀಡಿದರು.
ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಆಡಳಿತ ಸುಧಾರಣೆ, ಆರ್ಥಿಕ ಸುಧಾರಣೆ, ಮುಲಭೂತ ಸೌಲಭ್ಯಗಳ ಅಭಿವೃದ್ಧಿ, ಹೊಸ ಯೋಜನೆಗಳ ರೂಪರೇಷೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದಿಂದ ಕೈಗೊಂಡಿರುವ ಅಭಿವೃದ್ಧಿ ಕ್ರಮಗಳ ಬಗ್ಗೆ ಎಸ್.ಎಂ. ಕೃಷ್ಣ ರವರು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯಕ್ಕೆ ಭೇಟಿ ನೀಡಲು ಇದೇ ಸಂದರ್ಭದಲ್ಲಿ ಆಹ್ವಾನಿಸಲಾಯಿತು. ಇಷ್ಟರಲ್ಲೇ ಸಂಸಾರ ಸಮೇತ ಭೇಟಿ ನೀಡುವುದಾಗಿ ತಿಳಿಸಿದರು.