ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 20 ರ ಬಳಿಕ ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಾನಗಲ್, ಸಿಂದಗಿ ಉಪಚುನಾವಣೆ ನಿಟ್ಟಿನಲ್ಲಿ ಅಕ್ಟೋಬರ್ 20 ರ ಬಳಿಕ ಬಿ.ಎಸ್. ಯಡಿಯೂರಪ್ಪ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು
ಇಂದು ಯಡಿಯೂರಪ್ಪರನ್ನು ಭೇಟಿಯಾಗಿ ದಸರಾ ಹಬ್ಬದ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದೇನೆ. ಮೈಸೂರಿನಲ್ಲಿ ಇಂದು ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ ಎಂದು ತಿಳಿಸಿದ್ದಾರೆ