News Karnataka Kannada
Friday, May 10 2024
ಕರ್ನಾಟಕ

ಮುಖ್ಯಮಂತ್ರಿ ವಿಚಾರ ಬೇಗ ತಿಳಿಗೊಳಿಸಿ ; ಬಿಜೆಪಿ ಹೈಕಮಾಂಡ್‌ ಗೆ ಕುಮಾರಸ್ವಾಮಿ ಸಲಹೆ

Hd Kumara Swamy 15 7 21
Photo Credit :

 

ಮಂಡ್ಯ : ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು . ಇದು ನನಗೆ ಸಂಬಂಧಿಸಿದ ವಿಷಯ ಅಲ್ಲ, ಬಿಜೆಪಿ ಆಂತರಿಕ ವಿಚಾರ. ಬಿಜೆಪಿ ನಿರ್ಧಾರದಲ್ಲಿ ಮೂಗು ತೂರಿಸುವುದು ಶೋಭೆ ತರಲ್ಲ. ಸಿಎಂ ಬದಲಾವಣೆ ವಿಚಾರ 2 ವರ್ಷಗಳಿಂದ ನಡೆಯುತ್ತಿದೆ. ಸದ್ಯ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ.ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅವರ ಭಾವನೆ ಸರಿಯೋ ತಪ್ಪೋ ನಿರ್ಧಾರ ಜನರದ್ದು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ 2ವರ್ಷಗಳಿಂದ ನಡೆಯುತ್ತಿದೆ ಎಂದರು.
ಈ ವೇಳೆ ಮಾತನಾಡಿದ ಅವರು, ನಾಳಿದ್ದು ರಾಜಿನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12 ಸಾವಿರ ಕೋಟಿ ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ. 12ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ. ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ? ಈ ಭಾಗಕ್ಕೆ 1ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ.ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ? ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ? ಅವರಿಗೆ ಅಂತಹ ದರ್ದು ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ? ಎಂದು ಸಿಎಂ ಬಿಎಸ್‌ವೈ‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು