News Karnataka Kannada
Sunday, May 05 2024
ಕರ್ನಾಟಕ

ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ರಣದೀಪ್‌ ಸುರ್ಜೇವಾಲ

Randeep Singh 22 7 21
Photo Credit :

ಬೆಂಗಳೂರು, – ಮೂರು ದಿನಗಳ ರಾಜ್ಯ ಪ್ರವಾಸ ಹಾಗೂ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ಇಡಲು ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಿದ ಅವರು, ಸಂಜೆ ಮಂಗಳೂರಿಗೆ ತೆರಳಲಿದ್ದಾರೆ. ನಾಳೆಯಿಂದ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಸುರ್ಜೆವಾಲಾ ಅವರಿಗೆ ಸಾಥ್ ನೀಡಲಿದ್ದಾರೆ. ಕಾಂಗ್ರೆಸ್‍ನಲ್ಲಿ ಹಲವಾರು ಒಳ ಬೇಗುದಿಗಳಿದ್ದು, ಅದನ್ನು ನಿವಾರಿಸಿ ಐಕ್ಯತೆ ತರುವುದು ಕಾಂಗ್ರೆಸ್ ನಾಯಕರ ಅಜೆಂಡವಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಇದು ಅನಿವಾರ್ಯವೂ ಕೂಡ. ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಒಂದು ಸುತ್ತಿನ ಪ್ರವಾಸ ಕೈಗೊಂಡಿದ್ದಾರೆ. ಎರಡನೇ ಸುತ್ತಿನ ಪ್ರವಾಸದ ವೇಳೆ ಸುರ್ಜೆವಾಲಾ ಅವರು ಜತೆಯಾಗಲಿದ್ದು, ಪಕ್ಷ ಸಂಘಟನೆಯ ಕುರಿತು ದೃಢ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಪದಾಧಿಕಾರಿಗಳ ನೇಮಕ, ಜಿಲ್ಲಾ ಸಮಿತಿಗಳ ಬದಲಾವಣೆ ಸೇರಿದಂತೆ ಅನೇಕ ಬೆಳವಣಿಗೆಗಳಿಗೆ ಸುರ್ಜೆವಾಲಾ ಸಾಕ್ಷಿಯಾಗುವ ಸಾಧ್ಯತೆಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು