News Karnataka Kannada
Tuesday, May 07 2024
ಕರ್ನಾಟಕ

ಮೂಲಭೂತ ಸೌಲಭ್ಯದ ಕೊರತೆ: ಹೆಬ್ಬಾಲೆ ಹಾಡಿ ನಿವಾಸಿಗಳ ಪ್ರತಿಭಟನೆ

Photo Credit :

ಮೂಲಭೂತ ಸೌಲಭ್ಯದ ಕೊರತೆ: ಹೆಬ್ಬಾಲೆ ಹಾಡಿ ನಿವಾಸಿಗಳ ಪ್ರತಿಭಟನೆ

ಮಡಿಕೇರಿ: ಕುಡಿಯುವ ನೀರು ರಸ್ತೆ ಮನೆ ಸೇರಿದಂತೆ ಮೂಲ ಸೌಕರ್ಯ ನೀಡಬೇಕೆಂದು ಒತ್ತಾಯಿಸಿ ವಿರಾಜಪೇಟೆ ತಾಲೂಕಿನ ದೇವರಪುರ ಗ್ರಾಮ ಪಂಚಾಯಿತಿ ಎದುರು ಆದಿವಾಸಿಗಳು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರದೇಶದಲ್ಲಿ ಕಳೆದ ಐವತ್ತು ವರ್ಷಗಳಿಂದ ವಾಸವಾಗಿದ್ದರೂ ಜಿಲ್ಲಾಡಳಿತ ಹಾಗೂ ಸರಕಾರ ಯಾವುದೇ ಸೌಲಭ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಬುಡಕಟ್ಟು ಆದಿವಾಸಿ ಮುಖಂಡೆ ಪ್ರೇಮ ಮಾತನಾಡಿ ದೇವರಪುರ ಗಿರಿಜನ ಹಾಡಿಯಲ್ಲಿ 135 ಕುಟುಂಬಗಳು ವಾಸವಾಗಿದ್ದು, ಇಂದಿಗೂ ಕುಡಿಯುವ ನೀರು, ರಸ್ತೆ, ಮನೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು. ಗಿಡ ಮರಗಳನ್ನು ನೆಟ್ಟು ಕಾಡನ್ನು ಬೆಳೆಸಿದ ನಮಗೆ ಕಾಡಿನಲ್ಲಿ ವಾಸ ಮಾಡಲು ಅವಕಾಶ ಕಲ್ಪಿಸುತ್ತಿಲ್ಲ. ಪ್ರಭಾವಿ ವ್ಯಕ್ತಿಗಳು ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸಿದರೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳು ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಇದುವರೆಗೆ ಯಾವುದೇ ಸೌಲಭ್ಯಗಳು ದೊರೆತ್ತಿಲ್ಲ. ಹೆಬ್ಬಾಲೆ ಹಾಡಿ ವ್ಯಾಪ್ತಿಯಲ್ಲಿ 158 ಎಕರೆ ಸರ್ಕಾರಿ ಭೂಮಿಯನ್ನು ಸರ್ವೇ ಮಾಡಬೇಕು ಹಾಗೂ ಪುನರ್ ವಸತಿಯೊಂದಿಗೆ ಮೂಲ ಸೌಕರ್ಯ ಒದಗಿಸಿ ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು