ಬೆಂಗಳೂರು : ಮೇಕೆದಾಟು ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ.
ಮೇಕೆದಾಟು-ಮಹದಾಯಿ ಯೋಜನೆ ಹಾಗೂ ಆಲಮಟ್ಟಿ ಅಣೆಕಟ್ಟೆ ವಿಚಾರಗಳು ನೆರೆ ರಾಜ್ಯಗಳೊಂದಿಗೆ ವಿವಾದಕ್ಕೆ ಕಾರಣವಾಗಿವೆ. ರಾಜ್ಯದ ಹಿತ ದೃಷ್ಟಿಯಿಂದ ಈ ಹೋರಾಟ ಅನಿವಾರ್ಯವಾಗಿದ್ದು, ಪ್ರಾದೇಶಿಕ ಪಕ್ಷವಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು.
ಜೆಡಿಎಸ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವವರಿಗೆ ಹೋರಾಟ ಮಾಡುವ ಮೂಲಕ ಜೆಡಿಎಸ್ನ್ನು ಅಕಾರಕ್ಕೆ ತರುವ ಸಂಕಲ್ಪವನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಹೋರಾಟದಲ್ಲಿ ನಾನು ಭಾಗಿಯಾಗುತ್ತೇನೆ. ಹೋರಾಟ ಮಾಡುವಾಗ ಸರ್ಕಾರದ ಮೇಲೆ ಆರೋಪ ಮಾಡುವುದಿಲ್ಲ. ನಾವು ಹೋರಾಟ ಮಾಡಿ ಪಕ್ಷ ಉಳಿಸಿ ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದೀವಿ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ನಮಗೆ ಯಾರ ಮೇಲೂ ದ್ವೇಷವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದರು.