ಮೈಸೂರು: ಚಿನ್ನದಂಗಡಿ ದರೋಡೆ ವೇಳೆ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ಪುಣೆ, ಮುಂಬೈ ಮೊದಲಾದ ಕಡೆಗಳಲ್ಲಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಮುಂಬೈನಲ್ಲಿ ಇಬ್ಬರನ್ನು ಬಂಧಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ನಗರದ ವಿದ್ಯಾರಣ್ಯಪುರಂನ ಚಿನ್ನದಂಗಡಿ ಬಳಿ ದರೋಡೆಕೋರರು ನಡೆಸಿದ ಗುಂಡಿನ ದಾಳಿಗೆ ಗ್ರಾಹಕ ಬಲಿಯಾಗಿದ್ದ. ನಂತರ ಆರೋಪಿಗಳು ಚಿನ್ನಾಭರಣ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು.