ಬೆಂಗಳೂರು, ;ಕೊರೊನಾ ಸೋಂಕಿನ ನಡುವೆ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ
ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನ ಸುಸೂತ್ರವಾಗಿ ನಡೆಯಿತು. 2 ಲಕ್ಷಕ್ಕೂ ಹೆಚ್ಚು
ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಇಂದು ಜೀವವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆದಿದೆ.
ಬೆಂಗಳೂರಿನ 86 ಕೇಂದ್ರಗಳೂ ಸೇರಿದಂತೆ ರಾಜ್ಯದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ
ಸಿಇಟಿ ಪರೀಕ್ಷೆ ನಡೆದಿದೆ.
ಇಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆ ನಡೆದರೆ, ನಾಳೆ ಭೌತವಿಜ್ಞಾನ
ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ
ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು
ಮಂಗಳೂರು ಕೇಂದ್ರಗಳಲ್ಲಿ ಇದೇ 30 ರಂದು ಕನ್ನಡ ಪರೀಕ್ಷೆ ನಡೆಯಲಿದೆ.
ಇಂದು ಬೆಳಿಗ್ಗೆ 10.30 ರಿಂದ 11.30ರವರೆಗೆ ಜೀವಶಾಸ್ತ್ರ ಪರೀಕ್ಷೆ ನಡೆಯಿತು.
ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ನಾಳೆ
ಬೆಳಿಗ್ಗೆ 10.30 ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ2.30 ರಿಂದ
3.50ವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಆ. 30 ರಂದು ಬೆಳಿಗ್ಗೆ 11.30
ರಿಂದ 12.30ರವರೆಗೆ ಹೊರನಾಡು ಗಡಿನಾಡ ಕನ್ನಡಿಗ ಹಾಗೂ ಕನ್ನಡ ಅಭ್ಯರ್ಥಿಗಳಿಗೆ
ಪರೀಕ್ಷೆ ನಿಗದಿಯಾಗಲಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊರೊನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು
ಕೈಗೊಳ್ಳಲಾಗಿತ್ತು. ಸಾಮಾಜಿಕ ಅಂತರ, ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು
ಧರಿಸಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿತ್ತು.
ಈ ಮಧ್ಯೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ನಗರದ ಶೇಷಾದ್ರಿಪುರದ ಕಾಲೇಜಿಗೆ
ಭೇಟಿ ನೀಡಿ ಈ ಕೇಂದ್ರದಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ
ನಡೆಸಿದರು.
ಮೊದಲ ದಿನ ಸುಸೂತ್ರ ವಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.