News Karnataka Kannada
Saturday, May 04 2024
ಕರ್ನಾಟಕ

ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕರು, ಅವರ ಪ್ರವಾಸ ತಡೆ ಹಿಡಿಯುವ ಶಕ್ತಿ ಯಾರಿಗೂ ಇಲ್ಲ: ನಳಿನ್ ಕುಮಾರ್ ಕಟೀಲ್

Nalin Kumar
Photo Credit :

ಮಾಜಿ ಸಿಎಂ ಯಡಿಯೂರಪ್ಪ ಎರಡು ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಅಕ್ಟೋಬರ್ 16ರಿಂದ ಸಚಿವರು, ಶಾಸಕರು ಕ್ಷೇತ್ರದಲ್ಲಿಯೇ ಇದ್ದು ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರ ಎರಡರಲ್ಲಿಯೂ ಬಿಜೆಪಿ ಗೆಲುವು ಖಚಿತವಾಗಿದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎರಡು ಉಪಚುನಾವಣೆಗಳ ಬಗ್ಗೆ ನಾನು, ಸಿಎಂ ಚರ್ಚೆ ಮಾಡಿದ್ದೇವೆ. ಪ್ರವಾಸ, ಪ್ರಚಾರ ಬಗ್ಗೆ ಚರ್ಚೆ ಆಗಿದೆ. ಎರಡೂ ಕಡೆ ಗೆಲ್ಲಲು ಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಎರಡೂ ಕಡೆಯೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎರಡು ಕ್ಷೇತ್ರದಲ್ಲೂ ಯಡಿಯೂರಪ್ಪ ಪ್ರವಾಸ ಮಾಡಿ ಪ್ರಚಾರ ಕಾರ್ಯ ನಡೆಸಲಿದ್ದಾರೆ‌. ಕ್ಷೇತ್ರಗಳ ಉಸ್ತುವಾರಿ ಹಂಚಿಕೆ ಮಾಡಿದ್ದು, ಎಲ್ಲ ನಾಯಕರು ಕ್ಷೇತ್ರಕ್ಕೆ ತೆರಳಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅ.16ರ ನಂತರ ಎಲ್ಲರೂ ಕ್ಷೇತ್ರದಲ್ಲಿ ಇದ್ದು ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದರು.

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದಿಂದಲೇ ಅಡ್ಡಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಕಟೀಲ್, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕರು. ನಮ್ಮ ಸರ್ವ ಶ್ರೇಷ್ಠ ನಾಯಕ ಯಡಿಯೂರಪ್ಪ. ಅವರ ಪ್ರವಾಸ ತಡೆ ಹಿಡಿಯುವ ಶಕ್ತಿ ಬಿಜೆಪಿಯಲ್ಲಿ ಯಾರಿಗೂ ಇಲ್ಲ. ಉಪ ಚುನಾವಣೆ ನಂತರ ನವೆಂವರ್‌ನಲ್ಲಿ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ನಿಗಮ ಮಂಡಳಿ, ಸಂಪುಟ ವಿಸ್ತರಣೆ ಎಲ್ಲವೂ ಉಪ ಚುನಾವಣೆ ಬಳಿಕ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಜಿಲ್ಲಾ ಉಸ್ತುವಾರಿ ಜಟಾಪಟಿ ವಿಚಾರ ಚರ್ಚಿತವಾಗುತ್ತಿದೆ. ಜಿಲ್ಲಾ ಉಸ್ತುವಾರಿಗಳು ಯಾರು ಇರಬೇಕು, ಎಲ್ಲಿಗೆ ಇರಬೇಕು ಅಂತಾ ಸಿಎಂ ನಿರ್ಧಾರ ಮಾಡುತ್ತಾರೆ ಎಂದು ಕಟೀಲ್ ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು