News Karnataka Kannada
Monday, April 29 2024
ಕರ್ನಾಟಕ

ಯಡಿಯೂರಪ್ಪ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಒತ್ತಾಯ

Cm Yeddyurappa 6 7 21
Photo Credit :

ಬೆಂಗಳೂರು ; ವ್ಯಾಪಕ ಬ್ರಷ್ಠಾಚಾರದಲ್ಲಿ ತೊಡಗಿರುವ ರಾಜ್ಯದ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಯಡಿಯೂರಪ್ಪ ಅವರ ಮೇಲಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಅವರು ರಾಜ್ಯ ಹೈ ಕೋರ್ಟಿನ ಮುಖ್ಯ ನ್ಯಾಯ ಮೂರ್ತಿಗಳಿಂದಲೇ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಸಿಬಿಐ , ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಬರೇ ಬಿಜೆಪಿ ಪರ ಮತ್ತು ಅವರು ಹೇಳಿದಂತೆ ಕೆಲಸ ನಿರ್ವಹಿಸಬಾರದು. ಈ ಸಂಸ್ಥೆಗಳು ಸ್ವತಂತ್ರ ತನಿಖಾ ಸಂಸ್ಥೆಗಳಾಗಿದ್ದು ಯಡಿಯೂರಪ್ಪ ಅವರ ಮೇಲಿನ ಆರೋಪಗಳ ಬಗ್ಗೆ ತನಿಖೆ ನಡೆಸಿ ಸತ್ಯವನ್ನು ಹೊರತೆಗೆಯಬೇಕು ಎಂದೂ ಅವರು ಒತ್ತಾಯಿಸಿದರು.

ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಯಡಿಯೂರಪ್ಪ ಅವರ ವಿರುದ್ದ ಸ್ವಪಕ್ಷೀಯರೇ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿರುವಾಗ ಅದರ ವಿರುದ್ದ ತನಿಖೆ ನಡೆಸಲು ಹಿಂಜರಿಕೆ ಏಕೆ ಏಂದೂ ಅವರು ಪ್ರಶ್ನಿಸಿದರು. ಈ ಹಿಂದೆ ವಿಪಕ್ಷಗಳ ಶಾಸಕರನ್ನು ಖರೀದಿಸಲು ಹೊರಟಾಗ ಬಿಡುಗಡೆಗೊಂಡ ಆಡಿಯೋದಲ್ಲಿ ಯಡಿಯೂರಪ್ಪ ಅವರ ಧ್ವನಿ ಇದ್ದು ಇದನ್ನು ಸ್ವತಃ ಯಡಿಯೂರಪ್ಪ ಅವರೇ ನನ್ನದೇ ಧ್ವನಿ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ ಅವರು ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು