News Karnataka Kannada
Wednesday, May 01 2024
ಕರ್ನಾಟಕ

ಯಡಿಯೂರಪ್ಪ ಸರ್ಕಾರ ಕೆಡಹುವ ಬೆದರಿಕೆ ಒಡ್ಡಿದ್ದರು ಎಂದ ಯತ್ನಾಳ್‌

Yatnal Mysuru 5 7 21
Photo Credit :

 

ವಿಜಯಪುರ: ಮಾಜಿ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ದ ಬಿಜೆಪಿ ಹೈಕಮಾಂಡ್‌ ಗೆ ದೂರು ನೀಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ಆರೋಪ ಮಾಡುತ್ತಲೇ ಇದ್ದಾರೆ . ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು ನನಗೆ ಮುಖ್ಯಮಂತ್ರಿ ಆಗೋ ಅವಕಾಶವಿತ್ತು, ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು. ಯತ್ನಾಳ್ ಅವರನ್ನ ಸಿಎಂ ಮಾಡಿದರೆ ಮೂರು ತಿಂಗಳಲ್ಲಿ ಸರ್ಕಾರ‌ ಕೆಡವುತ್ತೇನೆಂದು ಕೇಂದ್ರದ ನಾಯಕರ ಮುಂದೆ ಯಡಿಯೂರಪ್ಪ ಬೆದರಿಕೆ ಹಾಕಿದ್ದರು ಎಂದು ಹೊಸ ಆರೋಪ ಮಾಡಿದ್ದಾರೆ.ನನಗೆ ಮುಖ್ಯಮಂತ್ರಿ ಆಗುವ ಅವಕಾಶವನ್ನು ಯಡಿಯೂರಪ್ಪ ತಪ್ಪಿಸಿದರು. ಆದರೆ ಈಗ ನಾನು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲ್ಲಾ. ಈ ಹಿಂದೆ ನಾನೇನೂ ದೆಹಲಿ‌ಯಲ್ಲಿ ಲಾಬಿ ಮಾಡಿ ಕೇಂದ್ರದಲ್ಲಿ ಸಚಿವ ಆಗಿರಲಿಲ್ಲ. ಮೋದಿ ಪ್ರಾಮಾಣಿಕರು, ದೇಶಕ್ಕಾಗಿ ಪರಿವರ್ತನೆ ಯಜ್ಞ ಮಾಡುತ್ತಿದ್ದಾರೆ. ದೆಹಲಿ ಲಾಬಿ ಮಾಡಿ ಮಂತ್ರಿಯಾಗೋವಷ್ಟು‌ ಕೆಳಮಟ್ಟದ ರಾಜಕಾರಣಿಯಲ್ಲಾ ನಾನು. ಯಡಿಯೂರಪ್ಪ ಒಬ್ಬರೇ ಬೊಮ್ಮಾಯಿ ಅವರನ್ನಾ ಸಿಎಂ ಮಾಡಿಲ್ಲ. ಯತ್ನಾಳ್ ಅವರನ್ನ ಸಿಎಂ ಮಾಡಿದರೆ ಮೂರು ತಿಂಗಳಲ್ಲಿ ಸರ್ಕಾರ‌ ಕೆಡವುತ್ತೇನೆಂದು ಕೇಂದ್ರದ ನಾಯಕರ ಮುಂದೆ ಯಡಿಯೂರಪ್ಪ ಬೆದರಿಕೆ ಹಾಕಿದರು ಎಂದು ಯತ್ನಾಳ್ ಹೇಳಿದ್ದಾರೆ.
ಯತ್ನಾಳ್ ಸಿಎಂ ಆದರೆ ಇವರೆಲ್ಲಾ ಜೈಲಿಗೆ ಹೋಗ್ತಾರೆ ಎಂಬ ಭಯವಿದೆ. 10 ಸಾವಿರ ಕೋಟಿ ಭ್ರಷ್ಟಾಚಾರವನ್ನು ಮಾಜಿ ಸಿಎಂ ಯಡಿಯೂರಪ್ಪ ಮಾಡಿದ್ದಾರೆ ಎಂದು ಇದೇ ವೇಳೆ ಯತ್ನಾಳ್ ಆರೋಪ ಮಾಡಿದರು. ಯಡಿಯೂರಪ್ಪ ತಾವು ಶಿಕಾರಿಪುರದ ಸಿಎಂ ಎಂಬಂತೆ ವರ್ತಿಸಿದರು. ತಮ್ಮ ಭಾಗಕ್ಕೇ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಕೊಂಡಿದ್ದಾರೆ. ಈಗ ಜಿಲ್ಲೆಗಳ ಪ್ರವಾಸಕ್ಕೆ ಬರುತ್ತೇನೆಂದು ಹೇಳುತ್ತಿದ್ದಾರೆ. ಯಡಿಯೂರಪ್ಪ ವಿಜಯಪುರ ಜಿಲ್ಲೆಗೆ ಬರಲಿ ನಾನೇ ಈ ಕುರಿತು ಪ್ರಶ್ನೆ ಮಾಡುತ್ತೇನೆ. ನನ್ನ ಬಗ್ಗೆ ಯಡಿಯೂರಪ್ಪ ಅವರಿಗೆ ಭಯ ಇದೆ. ಅದಕ್ಕೇ ನನಗೆ ಸಿಎಂ ಸ್ಥಾನ ತಪ್ಪಿಸಿದರು ಎಂದು ಯತ್ನಾಳ್ ಆರೋಪಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು