ಕಾರವಾರ: ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್ನ ಇಡಗುಂದಿ ಬಳಿ ಬುಧವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ ಸಂಚಾರವನ್ನು ಕೆಲಕಾಲ ಬಂದ್ ಮಾಡಲಾಗಿತ್ತು, ಇದೀಗ ಸಂಚಾರ ಮುಕ್ತವಾಗಿದೆ. ಅಂಕೋಲ ಭಾಗದ ಕಡೆ ತೆರಳುತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷದಿಂದ ಘಾಟಿಯಲ್ಲಿ ಪಲ್ಟಿಯಾಗಿ ಸ್ಫೋಟಗೊಂಡಿದೆ. ಈ ವೇಳೆ ಚಾಲಕನಿಗೆ ಅಲ್ಪ ಗಾಯವಾಗಿದ್ದು ತಕ್ಷಣದಲ್ಲಿ ಆತನನ್ನು ರಕ್ಷಣೆ ಮಾಡಲಾಗಿದೆ.ಸ್ಫೋಟದಿಂದ 500ಮೀಟರ್ಗೂ ಹೆಚ್ಚು ದೂರು ಬೆಂಕಿ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 300-400 ಮೀಟರ್ ದೂರಗಳಷ್ಟು ಏನಾಗಿದೆ ಅನ್ನೋ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ. ಯಲ್ಲಾಪುರದ ಇಡಗುಂದಿ ಬಳಿ ಪಲ್ಟಿಯಾಗಿ ಬಿದ್ದಿರುವ ಕೆಮಿಕಲ್ ಟ್ಯಾಂಕರ್ ನಿಂದ ಹೊರಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ ಹಾನಿಯಾಗಿದೆ.
ಯಲ್ಲಾಪುರದಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ – ತಪ್ಪಿದ ಭಾರೀ ಅನಾಹುತ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.