News Karnataka Kannada
Sunday, May 12 2024
ಕರ್ನಾಟಕ

ಯುವಕನ ಸಲಿಂಗಿ ವಿವಾಹಕ್ಕೆ ಕೊಡವ ಮುಖಂಡರ ಆಕ್ರೋಶ

Photo Credit :

ಯುವಕನ ಸಲಿಂಗಿ ವಿವಾಹಕ್ಕೆ ಕೊಡವ ಮುಖಂಡರ ಆಕ್ರೋಶ

ಮಡಿಕೇರಿ: ಈಗ ಎಲ್ಲೆಡೆ ಅಂತರ್ಜಾತಿ, ಅಂತರ್ಧರ್ಮೀಯ ಜತೆಗೇ ಸಲಿಂಗಿಗಳ ವಿವಾಹವೂ ನಡೆಯುವುದನ್ನು ಆಗಾಗ ಒದುತ್ತಿರುತ್ತೇವೆ. ಈ ನಡುವೆ ಇಂತಹದ್ದೇ ಮತ್ತೊಂದು ಸಲಿಂಗ ಜೋಡಿ ಅದ್ದೂರಿಯಾಗಿ ಅದೂ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಆದರೆ ಈ ಮದುವೆಗೆ ಕೊಡವ ಜನಾಂಗದವರಿಂ ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಈ ಮದುವೆ ಜನಾಂಗವನ್ನು ಕೆರಳಿಸಿದ್ದು, ಕೊಡವ ಸಮಾಜದಿಂದಲೇ ಮದುಮಗನನ್ನು ಹೊರಗಿಡಲು ಸಜ್ಜಾಗಿದೆ.

ಕೊಡಗು ಮೂಲದ ಶರತ್ ಪೊನ್ನಪ್ಪ ಎಂಬಾತನು ಸಂದೀಪ್ ದೋಸಾಂಜ್ ಎಂಬಾತನನ್ನು ಮದುವೆ ಆಗಿದ್ದಾನೆ. ವೈದ್ಯನಾಗಿರುವ ಶರತ್ ಪೊನ್ನಪ್ಪ ಅಮೇರಿಕಾಗೆ ತೆರಳಿ 20 ವರ್ಷ ಆಗುತ್ತಾ ಬಂದಿದೆ.

ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬಾತನ ಪರಿಚಯವಾಗಿದ್ದು, ಇಬ್ಬರಿಗೂ ಲವ್ ಆಗಿದೆ. ಪ್ರೀತಿ ಬೆಳೆದು ಕೊನೆಗೆ ಕಳೆದ ಸೆ.26ರಂದು ಮದುವೆಯನ್ನೂ ಮಾಡಿಕೊಂಡಿದ್ದಾರೆ. ಅದೂ ಕೊಡವ ಸಂಪ್ರದಾಯದ ಶೈಲಿಯಲ್ಲಿ! ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ವಿಡಿಯೋ, ಫೋಟೋ ವೈರಲ್ ಆಗಿದೆ.

ಕೊಡವರ ಆಕ್ರೋಶಕ್ಕೆ ಮುಖ್ಯ ಕಾರಣ ಅಗಿರುವುದು ಕೊಡವ ಸಾಂಪ್ರದಾಯಿಕ ಉಡುಪು ತೊಟ್ಟು ಮದುವೆ ಆಗಿರುವುದರ ಬಗ್ಗೆ. ತಲೆಗೆ ಪೇಟ ಧರಿಸಿದ್ದ ಸಲಿಂಗ ಮದುಮಕ್ಕಳು, ಕೊಡವರ ಸಾಂಪ್ರದಾಯಿಕ ಉಡುಗೆಯನ್ನು ಅರೆಬರೆಯಾಗಿ ತೊಟ್ಟಿದ್ದರು. ಇದಿರಿಂದ ಕೊಡವ ಜನಾಂಗಕ್ಕೆ ಅವಮಾನವಾಗಿದ್ದು, ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಇನ್ನು ಕಂಡಕಂಡಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಬಳಸುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

ಶರತ್ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 20 ವರ್ಷಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್ ಇಂಜಿನಿಯರ್ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬಂದು ಮೈಸೂರಿನಲ್ಲಿ ನೆಲೆಸಿದ್ದಾರೆ. ಈ ಕುರಿತು ಮಾತನಾಡಿದ ಯುನೈಟೆಡ್ ಕೊಡವ ಅರ್ಗನೈಸೇಷನ್ ಅಧ್ಯಕ್ಷ ಮಂಜು ಚಿಣ್ಣಪ್ಪ ಅವರು ಪ್ರತಿಕ್ರಿಯಿಸಿ ಸಲಿಂಗಿ ಮದುವೆಯಲ್ಲಿ ಕೊಡವ ಸಂಪ್ರದಾಯ ಉಡುಪು ಧರಿಸಿ ನಮ್ಮ ಸಂಸ್ಕೃತಿಯನ್ನು ಅವಮಾನಿಸಿದ್ದಾರೆ ಎಂದು ಅರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು