News Karnataka Kannada
Monday, April 29 2024
ಕರ್ನಾಟಕ

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅಧಿಕಾರ ಸ್ವೀಕಾರ

Raksha Ramaiah
Photo Credit :

ಬೆಂಗಳೂರು, ; ಕಳೆದ ಏಳು ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ರಕ್ಷಾ ರಾಮಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಉಸ್ತುವಾರಿ ನಾಯಕ ಕೃಷ್ಣ ಅಲಾವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಮೊಹಮ್ಮದ್, ಧ್ರುವನಾರಾಯಣ್, ಮಾಜಿ ಸಚಿವರಾದ ಎಂ.ಆರ್.ಸೀತಾರಾಮ್, ಆಂಜನೇಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ರಕ್ಷಾ ರಾಮಯ್ಯ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್‍ನ ಕಾರ್ಯಕರ್ತರು 9 ಸಾವಿರ ಜನರಿಗೆ ಬೆಡ್ ಒದಗಿಸಿದ್ದಾರೆ. ಎರಡೂವರೆ ಲಕ್ಷ ಆಹಾರ ಕಿಟ್ ವಿತರಣೆ, 500 ಠಾಣೆಗಳಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಕಾರ್ಯಕ್ರಮ ಮಾಡಿದ್ದಾರೆ. 8 ಸಾವಿರ ಮಂದಿಗೆ ಆ್ಯಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಎಂದು ವಿವರಿಸಿದರು. ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅಲೆ ಇರುವುದಂತೂ ನಿಜ. ಆದರೆ ಅದು ಮೋದಿಯದಲ್ಲ. ದ್ವೇಷ ಮತ್ತು ದುರಾಡಳಿತದ ಅಲೆಯಿದೆ. ಪ್ರಧಾನಿಯವರು ತನಿಖಾ ಸಂಸ್ಥೆಗಳನ್ನು ಖಾಸಗಿ ಆಸ್ತಿ ಎಂಬಂತೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು