Categories: ಕರ್ನಾಟಕ

ರಂಗೋಲಿ ಜಾತ್ರೆಯಲ್ಲಿ ಕಲಾಕಾರರ ಕೈಯಲ್ಲಿ ಅರಳಿದ ಚಿತ್ತಾರ

ಕಾರವಾರ: ಸಾಮಾನ್ಯವಾಗಿ ಎಲ್ಲಡೆ ದೇವರ ಹೆಸರಿನಲ್ಲಿ ಜಾತ್ರೆ-ಉತ್ಸವ ನಡೆಯುವುದು ಸಾಮಾನ್ಯ. ಅಲ್ಲಿ ದೇವರಿಗೆ ಹರಕೆ ಹೂ-ಕಾಯಿ ಸಲ್ಲಿಸುತ್ತಾರೆ. ಉಳಿದಂತೆ ಆಟಿಕೆ ಸಾಮಗ್ರಿ ಹಾಗೂ ಸಿಹಿ ತಿನಿಸುಗಳ ಅಂಗಡಿ ಮಳಿಗೆಗಳು, ನಾಟಕ ಪ್ರದರ್ಶನ ನಡೆಯುತ್ತವೆ. ಆದರೆ ಈ ಜಾತ್ರೆ ವಿಭಿನ್ನ ಹಾಗೂ ವಿಶೇಷವಾಗಿ ನಡೆಯುತ್ತದೆ.

ಕಾರವಾರ ನಗರದಲ್ಲಿ ನಡೆದ ಶ್ರೀ ಮಾರುತಿ ದೇವರ ಜಾತ್ರೆ ಉಳಿದೆಲ್ಲ ಜಾತ್ರೆಗಿಂತ ವಿಭಿನ್ನವಾಗಿದ್ದು ಅದ್ಧೂರಿಯಾಗಿ ನಡೆಯಿತು. ಜಾತ್ರೆಯ ಅಂಗವಾಗಿ ಗುರುವಾರ ರಾತ್ರಿ ನಡೆದ ರಂಗೋಲಿ ಸ್ಪರ್ಧೆ ಹಾಗೂ ಪ್ರದರ್ಶನ ಜನಮನ ಸೆಳೆಯಿತು. ಈ ಜಾತ್ರೆಯು ’ರಂಗೋಲಿಯ ಜಾತ್ರೆ’ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ದೇವರ ಪೂಜೆ ವಿಧಿವಿಧಾನಗಳು ಉಳಿದ ಜಾತ್ರೆಗಳಂತಿದ್ದರೂ ಇಲ್ಲಿರಂಗೋಲಿಗಳದ್ದೇ ಕಾರುಬಾರು. ಹಾಗಾಗಿ ಚಿಕ್ಕಮಕ್ಕಳಾದಿಯಿಂದ ಹಿಡಿದು ದೊಡ್ಡವರು ಇದನ್ನು ರಂಗೋಲಿ ಜಾತ್ರೆ ಎಂದೇ ಕರೆಯುತ್ತಾರೆ. 

ದಶಕಗಳ ಇತಿಹಾಸವಿದೆ:

ಈ ರಂಗೋಲಿಯ ಜಾತ್ರೆ ಇಂದು ನಿನ್ನೆಯದಲ್ಲ. ನಾಲ್ಕು ದಶಕಗಳ ಇತಿಹಾಸವಿದೆ. ವರ್ಷದಿಂದ ವರ್ಷಕ್ಕೆ ಇದು ತನ್ನ ಪ್ರಚಾರವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜಾತ್ರೆಯ ಮೊದಲ ದಿನ ವಿವಿಧ ಕಲಾವಿದರಕೈಯಲ್ಲಿ ಅರಳುವ ಹಲವು ರೀತಿಯ ವೈವಿಧ್ಯಮಯವಾದ ಕಲಾಕೃತಿಗಳ ವೀಕ್ಷಣೆಗೆ ಇಲ್ಲಿ ಜನರ ನೂಕು ನುಗ್ಗಲು ನಡೆಯುತ್ತದೆ.

ಕಾರವಾರ ನಗರದ ಮಾರುತಿ ಗಲ್ಲಿ, ಬ್ರಾಹ್ಮಣ ಗಲ್ಲಿ, ಹೆಸ್ಕಾಂ ರಸ್ತೆ ಹಾಗೂ ಸಬನೀಸ ಛಾಳಗಳ ರಸ್ತೆಗಳು ವಾಹನ ಓಡಾಟದಿಂದ ಮುಕ್ತಗೊಂಡು ಜನರ ಓಡಾಟದಿಂದ ತುಂಬಿರುತ್ತದೆ.ಸಂಜೆಯಾಗುತ್ತಿದ್ದಂತೆ ಈ ರಸ್ತೆಗಳ ಎಡುಬದಿಯಲ್ಲಿರುವ ಮನೆಗಳು ದೀಪಾಲಂಕಾರದಿಂದ ಶೃಂಗಾರಗೊಂಡು ಮನೆಯ ಮುಂದೆ ಬಣ್ಣ ಬಣ್ಣದ ಹಿಟ್ಟಿನಿಂದ ಕಲಾವಿದರ ಕಲ್ಪನೆಗೆ ತಕ್ಕಂತೆಕಲಾಕೃತಿಗಳು ಅರಳಿ ನಿಲ್ಲುತ್ತವೆ.  ಇದರ ಜೊತೆಗೆ ಮಾರುತಿ ದೇವರ ಹರಕೆ ಪೂಜೆ ಸಲ್ಲಿಕೆ ಫಲಾವಳಿಗಳ ಲೀಲಾವುಗಳು ಇನ್ನೊಂದು ಕಡೆಯಿಂದ ಮುಂದುರಿಯುತ್ತದೆ.

ಏಕದಳ-ದ್ವಿದಳ ಧಾನ್ಯಗಳು, ಹೂವು-ಎಲೆಗಳು, ಹಣ್ಣು-ತರಕಾರಿಗಳಿಂದ ಮತ್ತು ಬಣ್ಣ ಬಣ್ಣದ ಪುಡಿಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಶೈಲಿಯ ಚುಕ್ಕಿ ರಂಗೋಲಿಯಿಂದ ಹಿಡಿದುಕಲಾಕೃತಿಗಳು, ವ್ಯಕ್ತಿ ಚಿತ್ರಣಗಳು, ಪ್ರಸ್ತುತ ವಿದ್ಯಮಾನದಲ್ಲಿರುವ ಚಿತ್ರನಟರುಗಳು, ರಾಜಕೀಯ ವ್ಯಕ್ತಿಗಳು, ದೇವರ ಕಲಾಕೃತಿಗಳು ಕಲಾಕಾರರ ಕಲ್ಪನೆಯಲ್ಲಿ ಮೂಡಿದಂತವುಗಳು. ಇಲ್ಲಿ ಬಣ್ಣದಹಿಟ್ಟಿನಲ್ಲಿ ವೈವಿಧ್ಯಮಯ ಕಲೆಯ ಚಿತ್ತಾರವಾಗಿ ಅರಳುತ್ತದೆ. 

 

Desk

Recent Posts

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

24 mins ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

39 mins ago

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

55 mins ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

1 hour ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

1 hour ago

ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 hour ago