ನವದೆಹಲಿ: ಬಿಜೆಪಿ ಸೇರುವ ವದಂತಿಯ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ನೀಡಿದ್ದು ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.
ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಅದಕ್ಕೆ ಯಾವುದೇ ವಿಶೇಷತೆ ಮತ್ತು ಅಪಾರ್ಥವನ್ನು ಕಲ್ಪಿಸಬೇಡಿ. ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ ಎಂಬುದನ್ನು ಈ ಮೂಲಕವಾಗಿ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿ ಪತ್ರ ಬರೆದಿದ್ದಾರೆ.
ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು. ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೂ ಮುನ್ನ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದದ್ದವು. ಆದರೆ ರವಿ ಈ ಸುದ್ದಿಗಳನ್ನೆಲ್ಲ ತಳ್ಳಿ ಹಾಕಿದ್ದು ರಾಜಕೀಯ ಸೇರುವುದಿಲ್ಲ ಎಂದಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…