News Karnataka Kannada
Monday, April 29 2024
ಕರ್ನಾಟಕ

ರಾಜಕೀಯದಿಂದ ದೂರ ; ‘ರಜನಿ ಮಕ್ಕಳ್‌ ಮಂದ್ರಮ್‌’ ವಿಸರ್ಜಿಸಿದ ರಜನಿಕಾಂತ್‌

Rajinikanth Chennai 12 7 21
Photo Credit :

ಚೆನ್ನೈ: ತಾವು ಮುಂದೆ ಯಾವುದೇ ರೀತಿಯ ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ‘ರಜನಿ ಮಕ್ಕಳ್‌ ಮಂದ್ರಮ್‌’ (ಆರ್‌ಆರ್‌ಎಂ) ಸಂಘಟನೆಯನ್ನು ಸೋಮವಾರ ವಿಸರ್ಜಿಸಿದ್ದಾರೆ.
ಆರು ತಿಂಗಳ ಹಿಂದೆ ರಾಜಕೀಯದಿಂದ ದೂರ ಉಳಿಯುವುದಾಗಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಘೋಷಿಸಿದ್ದರು. ಈಗ ಆರ್‌ಆರ್‌ಎಂ ಸಂಘಟನೆಯ ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ರಾಜಕೀಯವನ್ನು ಪ್ರವೇಶಿಸದಿರಲು ರಜನಿ ನಿರ್ಧರಿಸಿದ್ದಾರೆ. ರಜನಿಕಾಂತ್ ಅವರ ರಾಜಕೀಯ ಪ್ರವೇಶಕ್ಕೆ ಆರ್‌ಆರ್‌ಎಂ ಸಂಘಟನೆಯನ್ನು ವೇದಿಕೆಯನ್ನಾಗಿ ರೂಪಿಸಲಾಗಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ರಜನಿ, ಆರೋಗ್ಯದ ಕಾರಣ ನೀಡಿ ‘ರಾಜಕೀಯ ಪ್ರವೇಶಿಸುವುದಿಲ್ಲ‘ ಎಂದು ಘೋಷಿಸಿದ್ದರು.
ಡಿಸೆಂಬರ್3, 2020ರಂದು, ‘ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ‘ ನಟ ರಜನಿಕಾಂತ್ ಪ್ರಕಟಿಸಿದ್ದರು. ನಂತರ ಡಿಸೆಂಬರ್ ಕೊನೆಯ ವಾರದಲ್ಲಿ ಅವರು ಅನಾರೋಗ್ಯದ ಕಾರಣ ನೀಡಿ, ‘ರಾಜಕೀಯ ಪ್ರವೇಶಿಸುವುದಿಲ್ಲ‘ ಎಂದು ಪ್ರಕಟಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು