ಬೆಂಗಳೂರು, ; ತಾವು ಬಯಸಿದ ಖಾತೆಯನ್ನು ಕೊಡದಿರುವುದಕ್ಕೆ ಮುನಿಸಿಕೊಂಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಆನಂದ್ ಸಿಂಗ್ ಕೊನೆಗೂ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಖಾತೆಯನ್ನು ಬದಲಾವಣೆ ಮಾಡುವಂತೆ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಮಾತುಕತೆ ನಡೆಸಿ ಸೂಕ್ತ ನ್ಯಾಯ ಒದಗಿಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಕೊನೆಗೂ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದರು. ಕಂದಾಯ ಸಚಿವ ಆರ್.ಅಶೋಕ್, ಶಾಸಕ ರಾಜುಗೌಡ ನಾಯಕ್ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಇಂದೇ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗೆ ತೆರಳಿ ಅಧಿಕಾರವನ್ನೂ ಸಹ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ನನ್ನ ಸಮಸ್ಯೆಯನ್ನು ಮನವರಿಕೆ ಮಾಡಿದ್ದೇನೆ. ಅವರ ಮಾತಿನ ಮೇಲೆ ನಂಬಿಕೆ ಇರುವುದರಿಂದ ಈಗ ಕೊಟ್ಟಿರುವ ಖಾತೆಯಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದರು.
ರಾಜೀನಾಮೆ ನಿರ್ಧಾರ ಕೈ ಬಿಟ್ಟ ಸಚಿವ ಆನಂದ್ ಸಿಂಗ್; ಅಧಿಕಾರ ಸ್ವೀಕಾರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.