ಮಡಿಕೇರಿ ; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನಾಗಿ ಬದಲಾಯಿಸಿದ ಬೆನ್ನಲ್ಲೇ ನಾಗರಹೊಳೆಯ ರಾಜೀವ್ ಗಾಂದಿ ರಾಷ್ಟ್ರೀಯ ಉದ್ಯಾನವನದ ಹೆಸರನ್ನು ಬದಲಾಯಿಸಬೇಕೆಂಬ ಕೂಗು ಎದ್ದಿದೆ.ಈಗಾಗಲೇ ಕೊಡಗಿನ ಕೆಲವು ಯುವಕರು ಚೇಂಜ್ ಡಾಟ್ ಆರ್ಗ್ ನಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ. ಈಗ ಸಾಮಾಜಿಕ ಜಾಲ ತಾಣಗಳಲ್ಲೂ ಈ ಕುರಿತ ಚರ್ಚೆ ಅರಂಭಗೊಂಡಿದೆ.
ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈಗಾಗಲೇ ಅಭಿಯಾನ ಆರಂಬಿಸಿರುವ ನವೀನ್ ಮಾದಪ್ಪ ಮತ್ತು ಕಾಯಪಂಡ ವಿನಯ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಅರಣ್ಯ ಸಚಿವ ಭೂಪೇಂದರ್ ಯಾದವ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿಯ ಸಾವಿನ ನಂತರ ಒಂದು ನಿರ್ದಿಷ್ಟ ಕುಟುಂಬ ಮತ್ತು ಪಕ್ಷವನ್ನು ಸಮಾಧಾನಪಡಿಸಲು ರಾಷ್ಟ್ರೀಯ ಉದ್ಯಾನದ ಹೆಸರನ್ನು ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ. ರಾಜೀವ್ ಗಾಂಧಿ .. ರಾಷ್ಟ್ರೀಯ ಉದ್ಯಾನವನಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅಥವಾ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಉದ್ಯಾನವನದ ಹೆಸರಿಡಬಹುದು ಎಂದು ನೆಟ್ಟಿಗರು ವಾದಿಸಿದ್ದಾರೆ.
ಅಖಿಲಾ ಕೊಡವ ಸಮಾಜ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಚಮ್ಮಟಿರ ಪ್ರವೀಣ್ ಉತ್ತಪ್ಪ ಅವರನ್ನು ಸಂಪರ್ಕಿಸಿದಾಗ ನಾಗರಹೊಳೆ ಎಂಬ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಅಂದಿನ ಸರ್ಕಾರವು ಈ ಹೆಸರನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರಿನಲ್ಲಿ ಬದಲಾಯಿಸಿತು, ಇದು ನಿಜಕ್ಕೂ ಸೂಕ್ತವಲ್ಲ . ನಾಗರಹೊಳೆ ಎಂಬ ಹೆಸರು ಸ್ಥಳೀಯ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ಸರ್ಕಾರವು ಈ ಹೆಸರನ್ನು ಬದಲಾಯಿಸುವ ಸಂದರ್ಭದಲ್ಲಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಕೊಡಗಿನ ಹಿರಿಮೆಯನ್ನು ಎತ್ತಿ ಹಿಡಿದ ಮಹಾನ್ ಯೋಧರಾಗಿದ್ದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಅಥವಾ ಜನರಲ್ ತಿಮ್ಮಯ್ಯ ಅವರ ಹೆಸರಿಡುವುದೇ ಅತ್ಯಂತ ಸೂಕ್ತ ಎಂದು ಹೇಳಿದರು.
ಈ ಕುರಿತು ಮಾತನಾಡಿದ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಅದ್ಯಕ್ಷ ಎನ್ ಯು ನಾಚಪ್ಪ ಅವರು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೊಡಗಿನ ಹೆಸರನ್ನು ಮಡಿಕೇರಿ ಜಿಲ್ಲೆ ಎಂದು ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ನೂರಾರು ಕೊಡವ ಜಾನಪದ ,ಸಂಸ್ಕೃತಿಯನ್ನು ಬಿಂಬಿಸುವ ಹಳ್ಳಿಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂದು ಅವರು ಹೇಳಿದರು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹಳ್ಳಿಯ ಹೆಸರನ್ನು ಬದಲಾಯಿಸಿಲ್ಲ ಎಂದೂ ಅವರು ಹೇಳಿದರು. ನಮ್ಮ ಪುರಾತನ ಕೊಡವ ಹಳ್ಳಿಯ ಹೆಸರುಗಳು ನಮ್ಮ ಬುಡಕಟ್ಟು ಮನೆತನ, ಕೊಡವ ಸಂಸ್ಕೃತಿ ಮತ್ತು ಗುರುತನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು.
ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಮರುನಾಮಕರಣಕ್ಕೆ ಆನ್ಲೈನ್ ಅರ್ಜಿ ಅಭಿಯಾನ ಆರಂಭ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.