ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಇಂದು ಒಂದು ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ.ರಾಜ್ಯದಲ್ಲಿ ಇಂದು 973 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1324 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಬಾಗಲಕೋಟೆ, ಬೀದರ್, ರಾಯಚೂರು ಮತ್ತು ವಿಜಯ ಪುರ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.64 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 1.54ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,392 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 28,92,517 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,293 ಕ್ಕೆ ಹೆಚ್ಚಳವಾಗಿದೆ.
ರಾಜ್ಯದಲ್ಲಿ ಅತಿ ಕಡಿಮೆ ಸೋಂಕು: 973 ಮಂದಿಗೆ ಕೊರೊನಾ,15 ಮಂದಿ ಸಾವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.