News Karnataka Kannada
Sunday, April 28 2024
ಕರ್ನಾಟಕ

ರಾಜ್ಯದಲ್ಲಿ ಒಟ್ಟು 83 ತಾಲ್ಲೂಕುಗಳು ಪ್ರವಾಹ ಪೀಡಿತ ; ಸಚಿವ ಆರ್‌ ಅಶೋಕ್‌

Ashok Revenue 28 6 21
Photo Credit :

ಬೆಂಗಳೂರು: ರಾಜ್ಯದಲ್ಲಿ ಒಟ್ಟು 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈಗ ಮತ್ತೆ ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಬೆಳಗಾವಿ, ಚಿಕ್ಕಮಗಳೂರು, ಕಡೂರು, ತರಿಕೆರೆ, ಸೂಪ, ಬಬಲೇಶ್ವರ, ಕೊಲ್ಹಾರ, ಮುದ್ದೆಬಿಹಾಳ, ಮೂಡಿಗೆರೆ ಹೊಸನಗರಗಳ ಜತೆಗೆ ಇನ್ನೂ ಕೆಲವು ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಅತಿವೃಷ್ಟಿ ತಾಲೂಕಿನಲ್ಲಿ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲೂ 50 ಕ್ಕೂ ಹೆಚ್ಚು ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಚಂಡಮಾರುತದ ಅಬ್ಬರದ ಬಗ್ಗೆಯೂ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದ 40 ಕಡೆ ಅನುಷ್ಠಾನ ಮಾಡಲಾಗುತ್ತಿದೆ. ಅಲಾರಾಂ ಸಿಸ್ಟಂಗಳನ್ನು ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಹಣ ಬರಲಿದೆ. ಒಂದೊಂದು ಸಿಸ್ಟಂಗೆ 12 ಕೋಟಿ ಖರ್ಚಾಗುತ್ತದೆ ಎಂದು ಸಚಿವರು ಹೇಳಿದರು. ಈ ಅಲಾರಂ ಆರೇಳು ಕಿಮೀವರೆಗೆ ಇದು ಸೈರನ್ ಮಾಡಲಿದೆ. ಚಂಡಮಾರುತಗಳ ಸುಳಿವನ್ನ ನೀಡಲಿದೆ. ಇದು ಕರಾವಳಿ ಭಾಗದ ಜನರಿಗೆ ಅನುಕೂಲವಾಗಲಿದೆ. ಮೀನುಗಾರರಿಗೆ ಇದು ಹೆಚ್ಚು ಉಪಯೋಗವಾಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು