News Karnataka Kannada
Wednesday, May 08 2024
ಕರ್ನಾಟಕ

ರಾಜ್ಯದಲ್ಲಿ ಭಾನುವಾರದವರೆಗೂ ಮಳೆ ಮುಂದುವರಿಕೆ ; ಹವಾಮಾನ ಇಲಾಖೆ

Rain Main Newsk 2307886304 2
Photo Credit :

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ ನೈರುತ್ಯ ಮಾನ್ಸೂನ್‌ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಅಡಿಕೆ ಬೆಳೆಗಾರರಿಗೆ ಈ ಬಾರಿಯೂ ಫಸಲಿನ ಬಗ್ಗೆ ಆತಂಕ ಆರಂಭವಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಜುಲೈ 23ರ ತನಕವೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಆ ಪ್ರದೇಶಕ್ಕನುಗುಣವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ವಾತಾವರಣವಿದ್ದು ನಿತ್ಯವೂ ಸುರಿವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿರುವುದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜುಲೈ 21, 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸದರಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ. ಇಂದು ಮತ್ತು ನಾಳೆ (ಜುಲೈ 21 ಮತ್ತು 22) ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ 23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್​ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು