ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ನವೆಂಬರ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಕೋಲಾರ ಜಿಲ್ಲೆಯಲ್ಲಿ, ತುಮಕೂರು, ರಾಮನಗರ, ಮೈಸೂರು, ಧಾರವಾಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ನಾಳೆ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಮಹಾ ಮಳೆ ಕಾರಣದಿಂದ ಜಿಲ್ಲೆಯಲ್ಲಿ 83 ಸಾವಿರ ಹೆಕ್ಟರ್ ನಲ್ಲಿದ್ದ ರಾಗಿ ಜೋಳ ನೆಲಗಡಲೆ ಭತ್ತ ಹಾನಿಯಾಗಿದೆ. 2600 ಹೆಕ್ಟರ್ ಪ್ರದೇಶದಲ್ಲಿದ್ದ ತರಕಾರಿ ಹೂ ಹಣ್ಣು ಬೆಳೆಗಳು ಹಾಳಾಗಿದೆ. ಜಿಲ್ಲೆಯಲ್ಲಿದ್ದ 24 ಸೇತುವೆಗಳು ಹಾನಿಯಾಗಿವೆ.
ತುಮಕೂರು ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಮಳೆ ನೀರು ರೈತರ ಹೊಲಗಳಿಗೆ ನುಗ್ಗಿ ಹರಿಯುತ್ತಿದೆ. ಮಳೆ ನೀರು ಕೆರೆ ಹಳ್ಳದಂತೆ ಹರಿಯುತ್ತಿದೆ. ಕಟಾವಿಗೆ ಬಂದಿದ್ದ ಜೋಳದ ಹೊಲದಲ್ಲಿ ನೀರು ತುಂಬಿ ಹರಿದಿದೆ. ಹೀಗಾಗಿ ಜೋಳ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ.