ಬೆಂಗಳೂರು: ; ಕೊರೋನ ಸಕ್ರಿಯ ಪ್ರಕರಣಗಳಲ್ಲಿ ಮತ್ತೆ ಏರಿಕೆ ದಾಖಲಾಗಿರುವುದರಿಂದ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್ಡೌನ್ ಕರ್ಫ್ಯೂ ವಿಧಿಸುವದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಇಂದು ಈ ಕುರಿತು ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಾದ್ಯಂತ ಈಗಿರುವ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚಿರುವ ಮಹಾರಾಷ್ಟ್ರ ಮತ್ತು ಕೇರಳದ ಗಡಿಯ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ವಿಧಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು,’ ಶುಕ್ರವಾರದಿಂದಲೇ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಾಗಲಿದೆ’ ಎಂದರು.
ರಾತ್ರಿ ಕರ್ಫ್ಯೂ ಅವಧಿ ಪರಿಷ್ಕರಿಸಲಾಗಿದೆ. ರಾಜ್ಯದಾದ್ಯಂತ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.