ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ.
ಕೆಆರ್ಎಸ್ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ ಬಂದಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ” ಎಂದು ಹೇಳಿದ್ದಾರೆ.”ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಕೆಆರ್ಎಸ್ ಅಣೆಕಟ್ಟು ಸಮೀಪ ಇರುವುದನ್ನೂ ಹೇಳಿದ್ದೇನೆ. ಈ ಬಗ್ಗೆ ಮನವಿಪತ್ರವೊಂದನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೊಡುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ” ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಇನ್ನು ಚಿತ್ರನಟ ದರ್ಶನ್ ಹಾಗೂ ಉಮಾಪತಿ ಅವರ ನಡುವೆ ಆಸ್ತಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮಾತನಾಡಿ, “ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡುವಿದಿಲ್ಲ. ನಾನು ಅನಾವಶ್ಯಕವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಹೊಟೇಲ್ನಲ್ಲಿ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೇ ಗೊತ್ತಿಲ್ಲ, ನಾನು ನನ್ನ ಕೆಲಸದ ಕಡೆ ಗಮನ ಕೊಟ್ಟಿದ್ದೇನೆ” ಎಂದಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…