News Karnataka Kannada
Monday, April 29 2024
ಕರ್ನಾಟಕ

ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ

Vishweshwar Hegde Kageri
Photo Credit :

ಬೆಂಗಳೂರು, – ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರು ಗಳಿಗೆಯಲ್ಲೇ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಯಡಿಯೂರಪ್ಪನವರ ನಂತರ ಮುಖ್ಯಮಂತ್ರಿಯಾಗುವವರ ಪಟ್ಟಿಯಲ್ಲಿ ವಿಶ್ವೇಶ್ವರಹೆಗಡೆ ಕಾಗೇರಿ ಅವರ ಹೆಸರು ಇದ್ದು, ಅವರ ರಾಜ್ಯಪಾಲರ ಭೇಟಿ ನಾನಾ ವ್ಯಾಖ್ಯಾನಾಗಳಿಗೆ ಕಾರಣವಾಗಿದೆ. ವಿಧಾನಸಭಾಧ್ಯಕ್ಷ ಕಾಗೇರಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ಸೌಹಾರ್ದ ಭೇಟಿ. ಇದರಲ್ಲಿ ವಿಶೇಷ ಏನೂ ಇಲ್ಲ ಎಂದು ವಿಧಾನಸಭಾಧ್ಯಕ್ಷರ ಕಚೇರಿಯ ಪ್ರಕಟಣೆ ಹೇಳಿದೆ. ಕಳೆದ ೨ ವರ್ಷಗಳ ಅವಧಿಯಲ್ಲಿ ವಿಧಾನಸಭಾ ಸಚಿವಾಲಯ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತಂತೆ ರಾಜ್ಯಪಾಲರಿಗೆ ಸಭಾಧ್ಯಕ್ಷರು ಮಾಹಿತಿ ನೀಡಿದ್ದಾರೆ ಅಷ್ಟೇ. ಇದು ಸೌಹಾರ್ದ ಭೇಟಿ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು