ಹುಬ್ಬಳ್ಳಿ: ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಕಾರಣದಿಂದಾಗಿ ಸಂಸದೆ ಸುಮಲತಾ ಅವರು ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸರ್ಕಾರದಿಂದ ಉತ್ತರ ದೊರೆಯುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ, ಸುಮಲತಾರವರು ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆ ಆದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು. ಕೆಆರ್ ಎಸ್ ಸುತ್ತಮುತ್ತಲಿನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಿದ್ದಾರೆ. ಆದರೆ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕುಮಾರಸ್ವಾಮಿ ಅವರ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸರ್ಕಾರ ಹಾಗೂ ಎಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ರು.ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚೀಕೆ ಏನೂ ಇಲ್ಲವೆಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮಾಲಿನ್ಯ ಮಂಡಳಿಯ ಅಧಿಕಾರಿಯನ್ನ ವರ್ಗಾವಣೆ ಮಾಡೋಕೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡೋಕೆ ಅನೂಕೂಲವಾಗಿದೆ. ಕೋವಿಡ್ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ಪ್ರತಿಭಟನೆ ಮಾಡೋಕೆ ಬರಲ್ಲ ಅನ್ನೋದು ಗೊತ್ತಿದೆ. ಹೀಗಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಕೆ ಹಾಗೂ ತಮ್ಮ ಮಧ್ಯದಲ್ಲಿ ಯಾವುದೇ ಬಣಗಳಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಸಹ ಇಲ್ಲ. ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆದು ಎರಡೂವರೆ ಆಯ್ತು. ಅದರ ವರದಿಯನ್ನ ಸಲ್ಲಿಕೆ ಮಾಡಲಾಗಿದ್ರು. ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಚರ್ಚೆ ಮಾಡುತ್ತಿಲ್ಲವೆಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ ; ಸಿದ್ದರಾಮಯ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.