ಬೆಂಗಳೂರು : ಕೋವಿಡ್ -19 ಸಾಂಕ್ರಾಮಿಕ ವ್ಯಾಧಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊರಡಿಸಿದ್ದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 24(ಎಲ್) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜುಲೈ 3ರಂದು ನೈಟ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿತ್ತು.
ಕೋವಿಡ್-19 ಸಮುಚಿತ ವರ್ತನೆಗಳು ಮತ್ತು ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿದ ಪ್ರಮಾಣಿಕ ಕಾರ್ಯ ವಿಧಾನಗಳನ್ನು (SOPS) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತುಗಳಿಗೊಳಪಟ್ಟು ಕುದುರೆ ಓಟದ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಪ್ರಭಾವಕಾಶದ ಸಾಮರ್ಥ್ಯದಷ್ಟು ಮಾತ್ರ ಕುದುರೆ ಓಟದ ಪೋಷಕರು (racing patrons) ಕುದುರೆ ಓಟದ ಪಂದ್ಯಗಳಲ್ಲಿ ಭಾಗವಹಿಸಬಹುದು.
ಪೂರ್ಣವಾಗಿ ಕೋವಿಡ್ 19 ಲಸಿಕೆಯನ್ನು ಪಡೆದಂತಹ ವ್ಯಕ್ತಿಗಳಿಗೆ ಮಾತ್ರ ಇಂತಹ ಕ್ಲಬ್ ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.