News Karnataka Kannada
Sunday, May 12 2024
ಕರ್ನಾಟಕ

ರಾತ್ರೋರಾತ್ರಿ ನಿರ್ಮಾಣವಾದ ಅಕ್ರಮ ಕಟ್ಟಡಗಳು ನೆಲಸಮ

Photo Credit :

ರಾತ್ರೋರಾತ್ರಿ ನಿರ್ಮಾಣವಾದ ಅಕ್ರಮ ಕಟ್ಟಡಗಳು ನೆಲಸಮ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವನ್ನು ಸ್ವಚ್ಛ ಮತ್ತು ಹಸಿರುಮಯ ಮಾಡಲು ಈಗಾಗಲೇ ಪಣತೊಟ್ಟಿರುವ ನಗರಸಭೆಯ ಪೌರಾಯುಕ್ತರು ಇದೀಗ ನಗರಸಭೆಯ ಸ್ವತ್ತುಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ, ನಗರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 10 ರಲ್ಲಿನ ಉದ್ಯಾನವನದ ಜಾಗವನ್ನು ಅತಿಕ್ರಮಣ ಮಾಡಿಕೊಂಡು ನಿರ್ಮಿಸಿದ್ದ ಕಾಂಪೌಂಡ್ ಗೋಡೆಗಳನ್ನು ಮತ್ತು ಮನೆಗಳು ನಗರಸಭೆಯ ಪೌರಾಯುಕ್ತ ಡಿ ಲೋಹಿತ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಅಕ್ರಮ ಕಾಂಪೌಂಡ್ ಗೋಡೆ ಮನೆ ತೆರವುಗೊಳಿಸಲಾಗಿದೆ.

ನಗರಸಭೆಯ ಪೌರಾಯುಕ್ತ ಡಿ.ಲೋಹಿತ್ ಅವರು ನಡೆಸಿದ ಕಾರ್ಯಾಚರಣೆಗೆ ಕಂದಾಯ ಅಧಿಕಾರಿ ರಮೇಶ್ ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಸಾಥ್ ನೀಡಿದ್ದು, ಇಂದು ಬೆಳಗ್ಗೆ ಜೆಸಿಬಿ ಗಳೊಂದಿಗೆ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉದ್ಯಾನವನ ಜಾಗದಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ನಿರ್ಮಿಸಿದ್ದ ಕಾಂಪೌಂಡ್ ಮತ್ತು ಚಿಕ್ಕ ಮನೆಯೊಂದನ್ನು ನೆಲಸಮಗೊಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು