ರಾಯಚೂರು: ರಾಯರ ಬೃಂದಾವನಕ್ಕೆ 20 ಕೋಟಿ ರೂ. ಮೌಲ್ಯದ 2 ಚಿನ್ನದ ಪಾತ್ರೆ ಸಮರ್ಪಣೆ ಮಾಡಿದ ದಾನಿಗಳು. ಮಠಕ್ಕೆ ದಾನಿಗಳು ನೀಡಿದ ಚಿನ್ನದಿಂದ ತಯಾರಿಸಲಾದ ಪಾತ್ರೆಗಳನ್ನು ಮಠದ ಶ್ರೀಗಳು ರಾಯರಿಗೆ ಸಮರ್ಪಣೆ ಮಾಡಿದ್ದಾರೆ. 20 ಕೋಟಿ ರೂಪಾಯಿ ಮೌಲ್ಯದ ಈ ಎರಡು ಚಿನ್ನದ ಪಾತ್ರೆಗಳನ್ನು ಪಂಚಾಮೃತ ಅಭಿಷೇಕಕ್ಕೆ ಬಳಕೆ ಮಾಡಲು ಶ್ರೀಗಳು ತೀರ್ಮಾನಿಸಿದ್ದಾರೆ.
ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಈ ಹಿನ್ನೆಲೆಯಲ್ಲಿ ದಿನಕ್ಕೊಂದು ವಿಶೇಷ ಪೂಜೆ ರಾಯರ ಸನ್ನಧಿಯಲ್ಲಿ ನಡೆಯುತ್ತಿದೆ. ಅದರಂತೆ ಇಂದು ಉತ್ತರಾಧನೆ ನಡೆಯುತ್ತಿದೆ. ಈ ಸಂಭ್ರವನ್ನು ಮತ್ತಷ್ಟು ಇಮ್ಮಡಿಗೊಳಿಸಲು ರಾಯರ ಬೃಂದಾವನಕ್ಕೆ ಎರಡು ಚಿನ್ನದ ಪಾತ್ರೆಯನ್ನು ಸಮರ್ಪಣೆ ಮಾಡಲಾಗಿದೆ. ಮಠಕ್ಕೆ ದಾನಿಗಳು ನೀಡಿದ ಚಿನ್ನದಿಂದ ತಯಾರಿಸಲಾದ ಪಾತ್ರೆಗಳನ್ನು ಮಠದ ಶ್ರೀಗಳು ರಾಯರಿಗೆ ಸಮರ್ಪಣೆ ಮಾಡಿದ್ದಾರೆ. 20 ಕೋಟಿ ರೂಪಾಯಿ ಮೌಲ್ಯದ ಈ ಎರಡು ಚಿನ್ನದ ಪಾತ್ರೆಗಳನ್ನು ಪಂಚಾಮೃತ ಅಭಿಷೇಕಕ್ಕೆ ಬಳಕೆ ಮಾಡಲು ಶ್ರೀಗಳು ತೀರ್ಮಾನಿಸಿದ್ದಾರೆ.
ರಾಯರ ಬೃಂದಾವನಕ್ಕೆ 20 ಕೋಟಿ ರೂ. ಮೌಲ್ಯದ 2 ಚಿನ್ನದ ಪಾತ್ರೆ ಸಮರ್ಪಣೆ ಮಾಡಿದ ದಾನಿಗಳು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.