News Karnataka Kannada
Monday, April 29 2024
ಕರ್ನಾಟಕ

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

Basavaraj Bommaih V Ponnuraj 01082021
Photo Credit :

 

ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪಶುಸಂಗೋಪನೆ, ಡೈರಿ, ಮೀನುಗಾರಿಕೆ ಒಳಗೊಂಡಂತೆ ಆಗ್ರೋ ಉತ್ಪನ್ನಗಳ ಸಂಸ್ಕರಣೆಗೆ ಒತ್ತು ನೀಡಿ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುವುದು. ಇದಕ್ಕೆ ಸೆಕೆಂಡರಿ ಅಗ್ರಿಕಲ್ಚರ್ ಡೈರೆಕ್ಟರೇಟ್ ಎಂದು ಹೆಸರಿಟ್ಟು ಕೃಷಿಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ರೈತರ ಆದಾಯ ದ್ವಿಗುಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.
2023ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯತಂತ್ರ ಕುರಿತಂತೆ ಕೇಂದ್ರ ಸರ್ಕಾರ ರಚಿಸಿರುವ ಉನ್ನತಾಧಿಕಾರ ಸಮಿತಿಯ ಕಾರ್ಯತಂತ್ರ ಕುರಿತಂತೆ ಕೃಷಿ ಸಚಿವಾಲಯದ ಡಾ.ಅಶೋಕ್ ದಳವಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡೀ ದೇಶದಲ್ಲೇ ರೈತರ ಆದಾಯವನ್ನು ದ್ವಿಗುಣಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎಂಬ ಬಯಕೆ ತಮ್ಮದು. ರೈತರ ಆದಾಯ ದ್ವಿಗುಣಕ್ಕೆ ಬಹಳಷ್ಟು ಆಸಕ್ತಿ ತೆಗೆದುಕೊಂಡು ಹಲವಾರು ಕ್ರಮಗಳನ್ನು ಜಾರಿಗೊಳಿಸಲಾಗುವುದು.ರೈತರ ಆದಾಯ ದ್ವಿಗುಣಗೊಳಿಸಲು ಕೆಂದ್ರಸರ್ಕಾರ ನಮ್ಮ ಜತೆ ಕೈಜೋಡಿಸಲು ಸಿದ್ಧವಿದೆ. ಹಾಗಾಗಿ ಇಲ್ಲಿ ರೈತರಿರುವ ಸಮಿತಿಯನ್ನು ರಚಿಸಿ ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಕರ್ನಾಟಕಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವರದಿಯನ್ನು ಜಾರಿಗೊಳಿಸುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು