News Karnataka Kannada
Thursday, May 09 2024
ಕರ್ನಾಟಕ

ರೈತ ಮಹಿಳೆಯ ನಿಂದಿಸಿದ ಸಿಎಂ: ಬಿಜೆಪಿಯಿಂದ ಪ್ರತಿಭಟನೆ

Photo Credit :

ರೈತ ಮಹಿಳೆಯ ನಿಂದಿಸಿದ ಸಿಎಂ: ಬಿಜೆಪಿಯಿಂದ ಪ್ರತಿಭಟನೆ

ಕಾರವಾರ: ಮುಖ್ಯಮಂತ್ರಿ ಕುಮಾರಸ್ವಾಮಿ ರೈತರನ್ನು ಹಾಗೂ ರೈತ ಮಹಿಳೆಯನ್ನು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಗರ ಘಟಕದ ವತಿಯಿಂದ ಕಾರವಾರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕಾರವಾರ ನಗರದ ಗ್ರೀನ್ ಸ್ಟ್ರೀಟ್ ನಲ್ಲಿರುವ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಸಾಗಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ರೈತ ಮಹಿಳೆಯನ್ನು ಇಷ್ಟು ದಿನ ಎಲ್ಲಿ ಮಲಗಿದ್ದಿ? ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ರೈತರನ್ನು ಗೂಂಡಾಗಳೆಂದು ಕರೆದಿದ್ದಾರೆ. ಮಹಿಳಾ ಸಮಾಜಕ್ಕೆ ಹಾಗೂ ರೈತ ಸಮುದಾಯಕ್ಕೆ ಮುಖ್ಯಮಂತ್ರಿ ಅವಮಾನ ಮಾಡಿದ್ದು ಕೂಡಲೇ ಅವರು ರೈತರ ಬಳಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ, ತಾನು ರೈತರ ಮಗ, ಮಣ್ಣಿನ ಮಗ ಎಂದು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ರೈತರ ಸಂಕಷ್ಟಗಳನ್ನು ಪರಿಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ರೈತರನ್ನು ಕರೆದು ಹಗುರವಾಗಿ ಮಾತನಾಡಿದ್ದಲ್ಲದೇ ಅವರನ್ನು ಗೂಂಡಾಗಳೆಂದು ಕರೆದು ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ಕುಮಾರಸ್ವಾಮಿ ಸರಕಾರವು ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಹೋರಾಟ ಮಾಡುತ್ತಿರುವ ರೈತರ ಬೆಂಬಲಕ್ಕೆ ನಿಲ್ಲದೇ ಅಧಿಕಾರದ ಮದದಿಂದ ಅನ್ನ ನೀಡುವ ರೈತನನ್ನೇ ಗೇಲಿ ಮಾಡಿ ಅವರನ್ನೇ ಬಂಧಿಸುವ ಹಂತಕ್ಕೆ ತಲುಪಿದೆ. ಕಬ್ಬಿಗೆ ಕನಿಷ್ಟ ಬೆಂಬಲ ಬೆಲೆ ನೀಡುವಂತೆ ರ‍್ಯತರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರಕಾರವು ಯೋಚಿಸುತ್ತಿರುವುದು ಶೋಚನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು