ಕಾಸರಗೋಡು: ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಪೊಲೀಸರೋರ್ವರು ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ.
ನೀಲೇಶ್ವರದ ಪ್ರಕಾಶ್(35) ಮೃತಪಟ್ಟವರು. ನೀಲೇಶ್ವರ ರೈಲು ನಿಲ್ದಾಣ ಸಮೀಪ ರೈಲು ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಹಳಿ ದಾಟುತ್ತಿದ್ದಾಗ ಘಟನೆ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.