News Karnataka Kannada
Tuesday, May 07 2024
ಕರ್ನಾಟಕ

ಲಾಕ್‍ಡೌನ್ ಸಡಿಲಿಕೆ: ಗಡಿಭಾಗದಲ್ಲಿ ಬಿಗಿ ಬಂದೋಬಸ್ತ್

Photo Credit :

ಲಾಕ್‍ಡೌನ್ ಸಡಿಲಿಕೆ: ಗಡಿಭಾಗದಲ್ಲಿ ಬಿಗಿ ಬಂದೋಬಸ್ತ್

ಮಡಿಕೇರಿ: ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಹೊರ ತೆರಳುವ ಹಾಗೂ ಜಿಲ್ಲೆಗೆ ಆಗಮಿಸುವವರ ಸಂಖ್ಯೆ ಹೆಚ್ಚಳವಾಗಲಿರುವ ಹಿನ್ನೆಲೆಯಲ್ಲಿ ಕೊಡಗು ಗಡಿ ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಜಿಲ್ಲೆಗೆ ಆಗಮಿಸುವ ಮತ್ತು ಜಿಲ್ಲೆಯಿಂದ ತೆರಳುವವರ ಬಗ್ಗೆ ಪೊಲೀಸ್ ಇಲಾಖೆಯಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ಮತ್ತೊಂದು ಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಿಸಿರುವ ಕೋವಿಡ್-19 ತಪಾಸಣಾ ಕೇಂದ್ರದಲ್ಲಿ ವಲಸಿಗರ ಆರೋಗ್ಯ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ.

ಇತರೆಡೆಗಳಿಂದ ಜಿಲ್ಲೆಗೆ ಆಗಮಿಸುವವರನ್ನು ಥರ್ಮಲ್ ಸ್ಕ್ಯಾನ್‍ಗೆ ಒಳಪಡಿಸಿ ಜ್ವರ ತಪಾಸಣೆ ಮಾಡಿ ಸೀಲ್ ಹಾಕುವ ಮೂಲಕ ಹೋಂ ಕ್ವಾರಂಟೇನ್‍ಗೆ ಒಳಪಡಿಸಲಾಗುತ್ತಿದೆ.

ಈ ಎರಡೂ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು  ದಾಖಲೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭ ಶಾಸಕರು ತಪಾಸಣಾ ನಿರತ ಅಧಿಕಾರಿ, ಸಿಬ್ಬಂದಿಗಳಿಗೆ ಪಾನೀಯ ವಿತರಣೆ ಮಾಡಿದರು.

ಕೊಡಗು ಜಿಲ್ಲೆ ಹಸಿರುವ ವಲಯದಲ್ಲಿರುವ ಕಾರಣ ಮತ್ತಷ್ಟು ಎಚ್ಚರವಹಿಸುವುದು ಅಗತ್ಯ. ಜಿಲ್ಲೆಗೆ ಪ್ರತಿದಿನ ಕುಶಾಲನಗರ ಮತ್ತು ಸಂಪಾಜೆ ಗಡಿ ಗೇಟ್ ಮೂಲಕ ನೂರಾರು ಮಂದಿ ಪ್ರವೇಶಿಸುತ್ತಿದ್ದಾರೆ. ಸುಮಾರು 3 ಸಾವಿರ ಮಂದಿ ಜಿಲ್ಲೆಗೆ ಆಗಮಿಸಲಿರುವುದಾಗಿ ಜಿಲ್ಲಾಡಳಿತದ ನಿರೀಕ್ಷೆಯಿದೆ. ಬಂದವರನ್ನು ಸೂಕ್ತವಾಗಿ ತಪಾಸಣೆಗೆ ಒಳಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ, ತಹಶೀಲ್ದಾರ್ ಗೋವಿಂದರಾಜು, ವೃತ್ತ ನಿರೀಕ್ಷಕ ಎಂ.ಮಹೇಶ್, ನಗರ ಠಾಣಾಧಿಕಾರಿ ಗಣೇಶ್, ತಾಲೂಕು ಆರೋಗ್ಯ ಅಧಿಕಾರಿ ಶ್ರೀನಿವಾಸ್, ಕುಶಾಲನಗರ ಪ.ಪಂ. ಮುಖ್ಯಾಧಿಕಾರಿ ಸುಕುಕುಮಾರ್, ಕಂದಾಯಾಧಿಕಾರಿ ಮಧುಸೂದನ್, ವೈದ್ಯ ಡಾ.ಎಸ್.ಎಂ.ಭರತ್, ಜನಪ್ರತಿನಿಧಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು