ತುಮಕೂರು: ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಅವರು ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾಕರೆಂದು ಗುರುತಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಸ್ವಾಗತಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸ್ಸು ನ್ನು ಸ್ವಾಗತಿಸಲಾಗಿದೆ. ಇದೊಂದು ಒಳ್ಳೆಯ ಬೆಳವಣಿಗೆ.ಕೇಂದ್ರ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಕಾದು ನೋಡಬೇಕು’ ಎಂದರು.
ಇದೇ ವೇಳೆ ಅವರು ‘ಹಿಂದು ಧರ್ಮವನ್ನು ಒಡೆಯಲು ಸಾಧ್ಯವಿಲ್ಲ. ಜೈನ, ಬೌದ್ಧ ಧರ್ಮವೂ ಹಿಂದು ಧರ್ಮದಲ್ಲಿದೆ ಅವರು ಅನೇಕ ಹಿಂದು ಧರ್ಮದ ಆಚರಣೆಗಳನ್ನು ಪಾಲಿಸುತ್ತಾರೆ’ ಎಂದರು.