Categories: ಕರ್ನಾಟಕ

ಲೈಟ್ ಫಿಶಿಂಗ್: ಎರಡು ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

ಕಾರವಾರ: ಸರ್ಕಾರ ಎಷ್ಟೇ ನಿಯಮಗಳನ್ನು ಹೇರಿದರೂ, ಕಾನೂನು ಉಲ್ಲಂಘನೆ ಮಾಡಿ ಗೋವಾದ ಯಾಂತ್ರಿಕೃತ ಬೋಟ್ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿವೆ. ಮಂಗಳವಾರ ಬೆಳಗಿನ ಜಾವ ಕೋಸ್ಟ್ ಗಾರ್ಡ್ ಗೋವಾದ 2 ಬೋಟುಗಳನ್ನು ವಶಪಡಿಸಿಕೊಂಡು ಕಾರವಾರದ ಬೈತಖೋಲ್ ಬಂದರಿಗೆ ತಂದಿದೆ.

ಮೀನುಗಾರಿಕೆ ಇಲಾಖೆ ಹಾಗೂ ಪೊಲೀಸರಿಗೆ ಅವೈಜ್ಞಾನಿಕ ಮೀನುಗಾರಿಕೆ ಮಾಡುತ್ತಿದ್ದ 2 ಬೋಟುಗಳನ್ನು ವಶಕ್ಕೆ ನೀಡಲಾಗಿದೆ. ಬೆಳಕು ಮೀನುಗಾರಿಕೆ ಮಾಡುವ ಸಾಮಗ್ರಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಲೈಟ್ ಫಿಶಿಂಗ್ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಕಳೆದ 3 ದಿನಗಳ ಹಿಂದೆ ಲಾಕ್ ಡೌನ್ ನಡುವೆ ಗೋವಾದ 2 ಬೋಟ್ ಗಳನ್ನು ಲೈಟ್ ಫಿಷಿಂಗ್ ಮಾಡುತ್ತಿರುವಾಗ ಭಾರತೀಯ ಕೋಸ್ಟ್ ಗಾರ್ಡ್ ನವರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದರು. ಅಲ್ಲದೆ ಬೋಟಿಯಲ್ಲಿದ್ದ ಒಟ್ಟು 28 ಜನ ವಿವಿಧ ರಾಜ್ಯದ ಕಾರ್ಮಿಕರನ್ನು ಕ್ವಾರಂಟೈನ್ ಒಳಪಡಿಸಲಾಗಿತ್ತು. ಅವೈಜ್ಞಾನಿಕವಾಗಿ ಸಮುದ್ರದಲ್ಲಿ ಬೆಳಕು ಮೀನುಗಾರಿಕೆ ಮಾಡುವುದರಿಂದ ಮತ್ಸ್ಯಕ್ಷಾಮ ಎದುರಾಗುವ ಭೀತಿ ಸ್ಥಳೀಯ ಮೀನುಗಾರರಲ್ಲಿ ಇದೆ.

Desk

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

6 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

17 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

25 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

41 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

48 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago