ದಾವಣಗೆರೆ: ಲೋಕಸಭೆ ಚುನಾವಣೆ ಮುಗಿದ ಬಳಿಕ ಕುಮಾರಸ್ವಾಮಿ ಎಲ್ಲಿದೀಯಪ್ಪ ಎನ್ನುವುದು ಟ್ರೆಂಡ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಗುರುವಾರ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಸಂಸದ ಜಿ.ಎಂ.ಸಿದ್ದೇಶ್ವರ ಪರ ಪ್ರಚಾರ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ವ್ಯಂಗ್ಯವಾಗಿ ಕುಮಾರಸ್ವಾಮಿ ಕಾಳೆಲೆದರು.
ಕುಮಾರಸ್ವಾಮಿ ಅವರಿಗೆ ಅಧಿಕಾರದ ಮದ ಬಂದಿದೆ. ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ. ತುಮಕೂರಿನಲ್ಲಿ ಕೂಡ ದೇವೇಗೌಡರು ಸೋಲುವರು ಎಂದು ಯಡಿಯೂರಪ್ಪ ಭವಿಷ್ಯ ನುಡಿದರು.
ಲೋಕಸಭೆ ಚುನಾವಣೆಗೆ ಹಣ ಬಳಕೆ ಮಾಡಲು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಶೇ.20 ಕಮಿಷನ್ ಪಡೆಯುತ್ತಿದೆ ಎಂದು ಯಡಿಯೂರಪ್ಪ ಆರೋಪ ಮಾಡಿದರು.