ಮಂಗಳೂರು: ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಮುಂದುವರಿದಿದ್ದು ದಕ್ಷಿಣ ಕನ್ನಡ ದ ಪ್ರಮುಖ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿ ,ಕೊಡಗು ಹಾಗೂ ಘಟ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ಕುಮಾರಧಾರ, ನೇತ್ರಾವತಿ, ಫಲ್ಗುಣಿ ಮೊದಲಾದ ನದಿಗಳು ತುಂಬಿ ಹರಿಯುತ್ತಿವೆ.ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ.
ಸ್ನಾನಘಟ್ಟ ಬಳಿ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ. ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅಪಾಯಕಾರಿ ಸ್ಥಿತಿ ಎದುರಿಸಲು ಗೃಹರಕ್ಷಕ ದಳ,ಅಗ್ನಿಶಾಮಕ ದಳ ಸಜ್ಜಾಗಿವೆ.
.