ವಾಯುಮಾಲಿನ್ಯ ತಡೆಗಟ್ಟಲು ರೂಪಿಸಿರುವ ಯೋಜನೆಗಳ ವಿವರಗಳನ್ನು ಅ.10ರೊಳಗೆ ಸಲ್ಲಿಸುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ಜಿಟಿ) ಸೂಚನೆ ನೀಡಿದೆ.
ರಾಷ್ಟ್ರೀಯ ಸ್ವಚ್ಛವಾಯು ಕಾರ್ಯಕ್ರಮ ಎಲ್ಲ ನಗರಗಳಿಗೂ ಅನ್ವಯವಾಗಲಿದ್ದು, ವಾಯುಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳುವ ಅಗತ್ಯ ಇದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ವಾಯುಮಾಲಿನ್ಯ ಪ್ರಮಾಣ ಏರಿಕೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. 2018 ರಲ್ಲಿ ಕೇಂದ್ರ ಸರ್ಕಾರ ಸ್ವಚ್ಛವಾಯು ಕಾರ್ಯಕ್ರಮ ಪ್ರಕಟಿಸಿದ್ದು, ಇದರಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಿರುವ 132 ನಗರಗಳ ಹೆಸರಿದೆ.