News Karnataka Kannada
Monday, May 06 2024
ಕರ್ನಾಟಕ

ವಿವಿಯಿಂದ ಅಮಾನತುಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

Photo Credit :

ವಿವಿಯಿಂದ ಅಮಾನತುಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಕಾಸರಗೋಡು: ವಿಶ್ವವಿದ್ಯಾನಿಲಯದಿಂದ ಅಮಾನತುಗೊಳಿಸಿದ್ದ ವಿದ್ಯಾರ್ಥಿಯೋರ್ವ ಕೈ ನರ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪೆರಿಯದಲ್ಲಿ ನಡೆದಿದೆ.

ಪೆರಿಯ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಅಖಿಲ್ ತಾಯತ್ತ್ (25) ಆತ್ಮಹತ್ಯೆಗೆತ್ನಿಸಿದವನು. ಈತನನ್ನು ಕಾಞಂಗಾಡ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈತ ವಿಶ್ವವಿದ್ಯಾಲಯ ವಿರುದ್ಧ ಫೇಸ್ ಬುಕ್ ನಲ್ಲಿ ಹೇಳಿಕೆಗಳನ್ನು ಪ್ರಚಾರಪಡಿಸಿದ್ದನು. ಈ ಹಿನ್ನೆಲೆಯಲ್ಲಿ ಈತನನ್ನು ವಿಶ್ವವಿದ್ಯಾಲಯದಿಂದ ಅಮಾನತುಗೊಳಿಸಲಾಗಿತ್ತು. ಅನಂತರ ಈತ ಪೆರಿಯದ ಸ್ನೇಹಿತನ ಮನೆಯಲ್ಲಿ ವಾಸಿಸುತ್ತಿದ್ದನು. ಇಂದು ಬೆಳಗ್ಗೆ ಈತ ವಿಶ್ವವಿದ್ಯಾಲಯ ಪರಿಸರದಲ್ಲಿ ತನ್ನ ಎಡ ಕೈಯ ನರವನ್ನು ಕತ್ತರಿಸಿದ್ದು, ಇದನ್ನು ಗಮನಿಸಿದ ಉಳಿದ ವಿದ್ಯಾರ್ಥಿಗಳು ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು