ಮಡಿಕೇರಿ: ಕಾನೂನು ಸೇವಾ ಪ್ರಾಧಿಕಾರದಿಂದ ಹಿರಿಯ ನಾಗರಿಕರಿಗಾಗಿ ವಿಶೇಷ ಲೋಕ ಅದಾಲತ್ ಕಾರ್ಯಕ್ರಮವು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ನ್ಯಾಯಾಲಯಗಳಲ್ಲಿ ನಡೆಯಿತು.
ಸುಮಾರು 145 ಪ್ರಕರಣಗಳು ದಾಖಲಾಗಿ 26 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ಮಡಿಕೇರಿ ನ್ಯಾಯಾಲಯದಲ್ಲಿ 71 ಪ್ರಕರಣಗಳಲ್ಲಿ 13 ಪ್ರಕರಣ ಇತ್ಯರ್ಥ, ಸೋಮವಾರಪೇಟೆ ನ್ಯಾಯಾಲಯದಲ್ಲಿ 61 ಪ್ರಕರಣ ದಾಖಲಾಗಿ 10 ಪ್ರಕರಣಗಳು ಇತ್ಯರ್ಥ. ಹಾಗೆಯೇ ವಿರಾಜಪೇಟೆ ನ್ಯಾಯಾಲಯದಲ್ಲಿ 13 ಪ್ರಕರಣಗಳು ದಾಖಲಾಗಿ 3 ಪ್ರಕರಣಗಳು ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ.
ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 5 ಪ್ರಕರಣಗಳು ಇತ್ಯರ್ಥವಾಗಿವೆ. ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ 89 ಪ್ರಕರಣಗಳಲ್ಲಿ 19 ಪ್ರಕರಣಗಳು ಇತ್ಯರ್ಥವಾಗಿವೆ.
ಇತರೆ 18 ಪ್ರಕರಣಗಳಲ್ಲಿ 2 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾa ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ಮಾಹಿತಿ ನೀಡಿದ್ದಾರೆ.