News Karnataka Kannada
Saturday, May 18 2024
ಕರ್ನಾಟಕ

ವೃದ್ದೆ ಕೊಲೆ ಮಾಡಿ ಚಿನ್ನಾಭರಣ ದೋಚಲು ಯತ್ನ ; ಓರ್ವ ಬಂಧನ

Photo Credit :

 ವೃದ್ದೆ ಕೊಲೆ ಮಾಡಿ ಚಿನ್ನಾಭರಣ ದೋಚಲು ಯತ್ನ ; ಓರ್ವ ಬಂಧನ

ಶಿವಮೊಗ್ಗ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕತ್ತು ಹಿಸುಕಿ ಯುವಕರಿಬ್ಬರು ಹಣ ದೋಚಲು ಯತ್ನಿಸಿದ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದೆ.
ಭವಾನಿಯಮ್ಮ (85) ಕೊಲೆಯಾದ ವೃದ್ಧೆ. ಕಟ್ಟೆಹಕ್ಕಲು ಗ್ರಾಮದ ಗಣಪತಿ ದೇವಸ್ಥಾನದ ಮುಂಭಾಗದ ಮನೆಯಲ್ಲಿ ಭವಾನಿಯಮ್ಮ ವಾಸವಾಗಿದ್ದರು. ಭವಾನಿಯಮ್ಮ ಅವರ ಮನೆಗೆ ಶಿವಮೊಗ್ಗದ ಶಿವು ಹಾಗೂ ನಿತಿನ್ ನೀರು ಕೇಳುವ ನೆಪದಲ್ಲಿ ಬಂದಿದ್ದಾರೆ, ವೃದ್ಧೆಯ ಮೇಲೆ ದಾಳಿ ನಡೆಸಿ ಹಣ ದೋಚಲು ಯತ್ನಿಸಿದ್ದಾರೆ. ನಂತರ ವೃದ್ಧೆ ಚೀರಾಟ ನಡೆಸಿದ್ದರಿಂದ ಕಳ್ಳರು ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಸ್ಥಳೀಯರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯಿಂದಾಗಿ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಸ್ಥಳೀಯರು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ವೃದ್ದೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಇಬ್ಬರು ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ದೇವಸ್ಥಾನದ ಆಭರಣ ಹಾಗೂ ಹುಂಡಿ ಕಳ್ಳತನ ನಡೆಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎನ್ನಲಾಗಿದೆ. ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ತಮ್ಮ ಚಾಳಿಯನ್ನು ಮಾತ್ರ ಬಿಡದೇ ಮುಂದುವರಿಸಿದ್ದಾರೆ. ಇವರ ಕಳ್ಳತನದ ದಾಹಕ್ಕೆ ಅಮಾಯಕ ವೃದ್ದೆಯೊಬ್ಬರು ಬಲಿಯಾಗುವಂತೆ ಆಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಆರೋಪಿ ನಿತಿನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿ ಶಿವು ಪತ್ತೆಗೆ ಬಲೆ ಬೀಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು