ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ ಮೇಲೆ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮನೆ ಗೆ ಹಾಲು ಹಾಕುವ ವ್ಯಕ್ತಿ ಹಾಲು ನೀಡಲು ಬಂದಿದ್ದರು. ಆದರೆ ದಾಳಿ ವೇಳೆ ಮನೆಯಲ್ಲಿದ್ದ ಕಾರಣ ಹೇಳಿ ಅಧಿಕಾರಿಗಳು ಆ ವ್ಯಕ್ತಿಯನ್ನು ಮನೆಯಲ್ಲಿ ಕೂರಿಸಿಕೊಂಡಿದ್ದಾರೆ. ಶಾಸಕರ ಮನೆ, ಕಚೇರಿ ಸೇರಿದಂತೆ 14 ಕಡೆ ಏಕಕಾಲದಲ್ಲಿ ಇಡಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದರು.
ಇಡಿ ದಾಳಿ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಧೃವ ನಾರಾಯಣ್ ಸೇರಿದಂತೆ ಹಲವರು ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದ್ದಾರೆ. ಇತ್ತ ಶಾಸಕ ನಿವಾಸದ ಮುಂದೆ ಜಮೀರ್ ಅಹ್ಮದ್ ಅವರ ಬೆಂಬಲಿಗರು ಸೇರಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರು ಐಎಂಎ ಗೋಲ್ಡ್ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿರುವ ಮಾಹಿತಿ ಹೊರಬಿದ್ದಿದೆ. ಮಗಳ ಮದುವೆಯ ಸಂದರ್ಭದಲ್ಲಿ ಜಮೀರ್ ಅವರು ಮನ್ಸೂರ್ ಬಳಿ 9 ಕೋಟಿ ಹಣ ಪಡೆದಿದ್ದಾರೆ. ಉಳಿದಿದ್ದ ಹಣವನ್ನು ಚಿನ್ನದ ರೂಪದಲ್ಲಿ ಪಡೆದುಕೊಂಡಿದ್ದರು. ಐಎಂಎ ಗೋಲ್ಡ್ ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಜಮೀರ್, ಬಡ್ಡಿಯ ರೂಪದಲ್ಲಿಯೂ ಕೂಡ ಹಣ ಪಡೆದುಕೊಂಡಿದ್ದರೆಂಬ ಮಾಹಿತಿ ತಿಳಿದುಬಂದಿದೆ. ತನಿಖೆಯು ಇಂದು ಸಂಜೆ ವೇಳೆಗೆ ಅಂತ್ಯವಾಗಲಿದೆ ಎಂದು ತಿಳಿದು ಬಂದಿದೆ.
ಶಾಸಕ ಜಮೀರ್ ಮನೆಗೆ ಹಾಲು ಹಾಕಲು ಬಂದವ ಕೂಡ ಒಳಗೆ ; ಹೊರಗೆ ಬೆಂಬಲಿಗರ ಘೋಷಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.