ಪರಶುರಾಂಪುರ(ಚಿತ್ರದುರ್ಗ): ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನು ನೆಲದ ಮೇಲೆಯೇ ಮಲಗಿಸಿ ಚಿಕಿತ್ಸೆ ನೀಡಿರುವ ದುಸ್ಥಿತಿಯು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ್ದು.
ಗಡಿಪ್ರದೇಶದ ಆಸ್ಪತ್ರೆಯಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮಹಿಳೆಯರು ಇಲ್ಲಿಗೆ ಚಿಕಿತ್ಸೆ ಬರುತ್ತಾರೆ. ಇದರಿಂದ ಒಂದೇ ದಿನ 52 ಮಂದಿ ಶಸ್ತ್ರಚಿಕಿತ್ಸೆ ನಡೆಸಿದ ಹಿನ್ನೆಲೆಯಲ್ಲಿ ಹಾಸಿಗೆಯಿಲ್ಲದೆ ಆಸ್ಪತ್ರೆಯ ಕಾರಿಡಾರ್ ನಲ್ಲಿ ಮಹಿಳೆಯರನ್ನು ಮಲಗಿಸಲಾಗಿದೆ.
ಇನ್ನೊಂದು ಕಡೆಯಲ್ಲಿ ಮಹಿಳೆಯರ ಮಕ್ಕಳು ಅಳುತ್ತಿರುವ ದೃಶ್ಯವು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸಿಗೆ ವ್ಯವಸ್ಥೆ ಇಲ್ಲದೇ ಇದ್ದರೆ ಒಂದೇ ದಿನ ಇಷ್ಟು ಮಂದಿಯ ಶಸ್ತ್ರಚಿಕಿತ್ಸೆ ಮಾಡಿರುವುದು ಯಾಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.