News Karnataka Kannada
Tuesday, April 30 2024
ಕರ್ನಾಟಕ

ಸಚಿವ ಆನಂದ್‌ ಸಿಂಗ್‌ ನಂತರ ಸಚಿವ ಎಂಟಿಬಿ ನಾಗರಾಜ್‌ ರಾಜೀನಾಮೆ ಬೆದರಿಕೆ

M T B Nagaraj
Photo Credit :

ಬೆಂಗಳೂರು :: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಸಚಿವರ ಅಸಮಾಧಾನ ಸ್ಪೋಟ ಗೊಂಡಿದೆ. ನಿರೀಕ್ಷಿತ ಖಾತೆ ಸಿಗದ ಹಿನ್ನಲೆ ಆನಂದ್​ ಸಿಂಗ್​ ಮತ್ತು ಎಂಟಿಬಿ ನಾಗರಾಜ್​ ಬಹಿರಂಗವಾಗಿ ಅಸಂತೃಪ್ತಿ ಹೊರಹಾಕಿದ್ದಾರೆ. ಭೂವಿಜ್ಞಾನ ಮತ್ತು ಪರಿಸರ, ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ಆನಂದ್​ ಸಿಂಗ್​ ಈ ಸಂಬಂಧ ಇನ್ನೆರಡು ದಿನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಜನಸೇವೆ ಮಾಡುವಂತಹ ಖಾತೆ ನಿರೀಕ್ಷೆಯಲ್ಲಿ ಇರುವುದಾಗಿ ತಿಳಿಸಿದ್ದ ಎಂಟಿಬಿ ನಾಗರಾಜು ಅವರಿಗೆ ಸಿಎಂ ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಕೈಗಾರಿಕೆ ಇಲಾಖೆ ನೀಡಿದ್ದಾರೆ. ಆದರೆ, ಇದು ತಾವು ಬಯಸಿದ ಖಾತೆ ಅಲ್ಲ ಎಂದಿರುವ ಎಂಟಿಬಿ ನಾಗರಾಜ್​, ಸಿಎಂ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಮ್ಮ ಖಾತೆ ಇನ್ನು ಮೂರು ದಿನದಲ್ಲಿ ಬದಲಾವಣೆ ಆಗದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಕುರಿತು ಟ್ವೀಟರ್​ನಲ್ಲಿ ಅಸಮಾಧಾನ ಹೊರ ಹಾಕಿರುವ ವಿಧಾನ ಪರಿಷತ್​ ಸದಸ್ಯರಾಗಿರುವ ಎಂಟಿಬಿ ನಾಗರಾಜ್​, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ.ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಟ್ವೀಟ್​ ಮೂಲಕ ಸಿಎಂಗೆ ಗಡುವು ನೀಡಿದ್ದಾರೆ.
ಎರಡು ಮೂರು ದಿನ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿರುವ ಅವರು, ಬಳಿಕವೂ ಸಿಎಂ ಖಾತೆ ಬದಲಾವಣೆ ಮಾಡದಿದ್ದರೆ, ಸುದ್ದಿಗೋಷ್ಠಿ ಕರೆದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು