News Karnataka Kannada
Monday, April 29 2024
ಕರ್ನಾಟಕ

ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

Ganesha
Photo Credit :

ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ ಸರಳವಾಗಿ ಆಚರಿಸುವಂತೆ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕೆಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
ಅದರಲ್ಲೂ ಆಡಳಿತಾರೂಢ ಬಿಜೆಪಿಯ ಸಚಿವರು ಮತ್ತು ಶಾಸಕರೇ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗಣಪತಿ ಹಬ್ಬ ಆಚರಣೆಗೆ ಅನುಮತಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲ ಇಂದು ನಡೆಯುವ ಸಭೆಯಲ್ಲಿ ಗಣೇಶ ಹಬ್ಬ ಆಚರಣೆಗೆ ಕೆಲವು ಷರತ್ತುಬದ್ದ ಅನುಮತಿ ನೀಡುವ ಸಂಭವವೂ ಇದೆ. ಒಂದು ವೇಳೆ ಆಚರಣೆಗೆ ಅನುಮತಿ ಕೊಡದಿದ್ದರೆ ಹಿಂದೂಪರ ಸಂಘಟನೆಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಆತಂಕ ಇರುವುದರಿಂದ ಸರ್ಕಾರ ನಿಯಮಗಳನ್ನು ವಿಧಿಸಿ ಆಚರಣೆಗೆ ಅನುಮತಿ ನೀಡಬಹುದು ಎನ್ನಲಾಗುತ್ತಿದೆ.ಇದೇ ಸಂದರ್ಭದಲ್ಲಿ ಆರನೇ ತರಗತಿಯಿಂದ 8ನೇ ತರಗತಿಗಳ ಪುನರಾರಂಭ, ಗಣೇಶ ಚತುರ್ಥಿ ಆಚರಣೆ, ಗಡಿ ಜಿಲ್ಲೆಗಳಲ್ಲಿ ಬಿಗಿಭದ್ರತೆ ಸೇರಿದಂತೆ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಶಾಲೆ ಆರಂಭದ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ನಡೆಯುತ್ತಿರುವ ಈ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ 6ರಿಂದ 8 ನೇ ತರಗತಿ ಶಾಲೆ ಆರಂಭದ ಕುರಿತಂತೆ ನಿರ್ಧಾರವಾಗಲಿದೆ.ಒಂದು ವೇಳೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಆರಂಭದ ಕುರಿತು ಗ್ರೀನ್ ಸಿಗ್ನಲ್ ನೀಡಿದರೆ ಶಾಲೆ ಆರಂಭಕ್ಕೆ ಇಂದೇ ಮುಹೂರ್ತ ಫಿಕ್ಸ್ ಆಗಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿಯೇ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಶೇ. 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು