News Karnataka Kannada
Thursday, May 09 2024
ಕರ್ನಾಟಕ

 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

Photo Credit :

 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಶಿವಮೊಗ್ಗ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಹೊಸದಾಗಿ ಆರಂಭಿಸಲಾಗಿರುವ ಸ್ಮಾರ್ಟ್ ಕ್ಲಾಸ್ ವೀಕ್ಷಣೆ ಮಾಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಮಾತನಾಡಿ ` ಜೂನ್ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಇನ್ನುಳಿದ 4-5ತಿಂಗಳಲ್ಲಿ ಕೇವಲ ಓದಿನ ಕಡೆಗೆ ಮಾತ್ರ ಗಮನ ನೀಡಿ. ಈಗಾಗಲೇ ಸಾಕಷ್ಟು ರಜೆ ಅನುಭವಿಸಿದ್ದೀರಿ. ಒಳ್ಳೆ ಶಾಲೆಯಲ್ಲಿ ಕಲಿಯುವ ಭಾಗ್ಯ ನಿಮಗೆ ದೊರೆತಿದೆ. ಚೆನ್ನಾಗಿ ಕಲಿತರೆ ನಿಮಗೆ ಮಾತ್ರವಲ್ಲ, ನಿಮ್ಮ ತಂದೆ ತಾಯಂದಿರಿಗೆ, ಶಿಕ್ಷಕರಿಗೆ ಎಲ್ಲರಿಗೂ ಸಂತೋಷ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಎಸ್‍ಎಸ್‍ಎಲ್‍ಸಿಗೆ ಕೊನೆಯಾಗಬಾರದು. ಮುಂದೆಯೂ ಛಲದಿಂದ ಕಲಿಯಬೇಕು. ಶಾಲೆಗೆ ಉತ್ತಮ ಫಲಿತಾಂಶವನ್ನು ತನ್ನಿ’ ಎಂದು ಹಾರೈಸಿದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ಸ್ಮಾರ್ಟ್ ಕ್ಲಾಸ್ ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಒಟ್ಟು 45ಶಾಲೆಗಳಲ್ಲಿ ಡಿಜಿಟಲ್ ಕ್ಲಾಸ್ ರೂಂ ಸಜ್ಜುಗೊಳಿಸಲಾಗಿದೆ. ಅತ್ಯಾಧುನಿಕ ಡಿಜಿಟಲ್ ಕ್ಲಾಸ್‍ನಲ್ಲಿ ಇಂಟರ್ಯಾಕ್ಟೀವ್ ಬೋರ್ಡ್, ವಿದ್ಯಾರ್ಥಿಗಳಿಗೆ ಲ್ಯಾಟ್‍ಟಾಪ್, ಸಿಸಿ ಕ್ಯಾಮರಾ ಸೇರಿದಂತೆ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಡಿಜಿಟಲ್ ಕ್ಲಾಸ್‍ರೂಂ ಬಳಕೆ ಬಗ್ಗೆ ಈಗಾಗಲೇ 300ಶಿಕ್ಷಕರಿಗೆ ತರಬೇತಿಂiÀiನ್ನು ಸಹ ನೀಡಲಾಗಿದೆ ಎಂದು ಹೇಳಿದರು.

`ಸ್ಮಾರ್ಟ್ ಕ್ಲಾಸ್‍ನಿಂದಾಗಿ ನಮ್ಮ ಕಲಿಕೆಗೆ ಅನುಕೂಲವಾಗಿದೆ. ಪ್ರಾಯೋಗಿಕವಾಗಿ ನೋಡಿ ತಿಳಿದುಕೊಳ್ಳಲು ಸಾಧ್ಯವಾಗಿದೆ. ವಿಡಿಯೊಗಳು ನಮ್ಮ ಕಲಿಕೆಯನ್ನು ಸುಲಭಗೊಳಿಸಿದೆ. ಇಂತಹ ಶಾಲೆಯಲ್ಲಿ ಕಲಿಯುತ್ತಿರುವುದು ಹೆಮ್ಮೆ ತಂದಿದೆ ಎಂದು ಏಳನೆ ತರಗತಿ ವಿದ್ಯಾರ್ಥಿನಿ ವೇದಿಕಾ ಸಚಿವರೊಂದಿಗೆ ಅನುಭವ ಹಂಚಿಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುವರ್ಣಾ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು