ಬೆಂಗಳೂರು, ;ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ಅನ್ವಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರದ ಮಾನ್ಯತೆ ಹೊಂದಿದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು ಸಿ.ಜಿ.ಹೆಚ್.ಎಸ್ ದರ ಪಟ್ಟಿಯನ್ವಯ ಆಯಾ ಇಲಾಖೆ ಹಂತದಲ್ಲಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯಡಿ ಹೃದ್ರೋಗ, ಕ್ಯಾನ್ಸರ್, ನ್ಯೂರೋ ಸರ್ಜರಿ, ಸುಟ್ಟ ಗಾಯ, ಗಂಭೀರ ಗಾಯಗಳು, ಪೀಡಿಯಾಟ್ರಿಕ್, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ ಸೇರಿದಂತೆ 7 ಮಾರಣಾಂತಿಕ ಕಾಯಿಲೆಗಳನ್ನು ಗುರುತಿಸಲಾಗಿದೆ. ಈ ಕಾಯಿಲೆಗಳಿಗೆ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಜ್ಯೋತಿ ಸಂಜೀವಿನಿ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಸರ್ಕಾರೀ ನೌಕರರ ಅವಲಂಬಿತರಿಗೂ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.